ಗೋಡಂಬಿ ಬೀಜಗಳಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುತ್ತದೆ. ಇದರ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಅದರಲ್ಲೂ ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರಿಗೆ ಇದರ ಸೇವನೆಯಿಂದ ಅನುಕೂಲವಿದೆ. ಗೋಡಂಬಿ ಬೀಜಗಳಿಗೆ ನಿದ್ರೆ ತರಿಸುವ ಶಕ್ತಿ ಇದೆ. ಹಾಗಾಗಿ ರಾತ್ರಿಯ ಸಮಯದಲ್ಲಿ ಹಾಲಿನ ಜೊತೆ ಗೋಡಂಬಿ ಬೀಜಗಳನ್ನು ಅಥವಾ ಅವುಗಳ ಪೌಡರ್ ಮಿಶ್ರಣ ಮಾಡಿ ಸೇವಿಸಬೇಕು.
ಗೋಡಂಬಿ ಬೀಜಗಳ ಆರೋಗ್ಯ ಲಕ್ಷಣಗಳು
ಗೋಡಂಬಿ ಬೀಜಗಳನ್ನು ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ ಎನ್ನುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಗೋಡಂಬಿ ಬೀಜಗಳಲ್ಲಿ ಕೊಲೆಸ್ಟ್ರಾಲ್ ಶೂನ್ಯ ಪ್ರಮಾಣದಲ್ಲಿದೆ. ಅದರ ಬದಲಾಗಿ ನಿಮಗೆ ಪ್ರೋಟೀನ್ ಆಂಟಿಆಕ್ಸಿಡೆಂಟ್ ಮತ್ತು ಆರೋಗ್ಯಕರ ಕೊಬ್ಬಿನ ಅಂಶಗಳು ಸಿಗುತ್ತವೆ. ನಮಗೆ ಬಹುತೇಕ ರಾತ್ರಿಯ ಸಮಯದಲ್ಲಿ ನಾವು ಅಂದುಕೊಂಡ ಮಟ್ಟದಲ್ಲಿ ನಿದ್ರೆ ಮಾಡಲು ಸಾಧ್ಯವಾಗಿರುವುದಿಲ್ಲ. ಅದಕ್ಕೆ ಕಾರಣ ಮಾನಸಿಕ ಒತ್ತಡ ಅಥವಾ ಬೇರೆ ಇನ್ನೇನಾದರೂ ಇರಬಹುದು. ಆದರೆ ಒಂದು ಲೋಟ ಹಾಲಿಗೆ ಸ್ವಲ್ಪ ಗೋಡಂಬಿ ಪೌಡರ್ ಮಿಶ್ರಣ ಮಾಡಿ ಕುಡಿಯುವುದರಿಂದ ಕರುಳು ಸ್ವಚ್ಛವಾಗುತ್ತದೆ ಮತ್ತು ಜೀರ್ಣ ಶಕ್ತಿ ಹೆಚ್ಚಾಗುತ್ತದೆ. ಇದರ ಜೊತೆಗೆ ರಾತ್ರಿಯ ಸಮಯದಲ್ಲಿ ನೆಮ್ಮದಿಯಾಗಿ ಮಗುವಿನಂತೆ ಮಲಗಿ ನಿದ್ರಿಸಬಹುದು. ಚರ್ಮದ ಹೊಳಪು ಕೂಡ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಹೃದಯದ ತೊಂದರೆ ಇರುವವರಿಗೆ ತುಂಬಾ ಒಳ್ಳೆಯದು. ಏಕೆಂದರೆ ಇದರಲ್ಲಿ ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಅಂಶವನ್ನು ಹೆಚ್ಚು ಮಾಡುವ ಗುಣವಿದೆ. ಜೊತೆಗೆ ಮೂಳೆಗಳ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು. ಮಕ್ಕಳಿಗೆ ಗೋಡಂಬಿ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಸುವುದರಿಂದ ವಯಸ್ಸಾದ ನಂತರದಲ್ಲಿ ಮೂಳೆಗಳಿಗೆ ಸಂಬಂಧ ಪಟ್ಟಂತೆ ಯಾವುದೇ ಸಮಸ್ಯೆ ಅಥವಾ ಆಸ್ಟಿಯೋಪೋರೋಸಿಸ್ ಬರುವುದಿಲ್ಲ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
ಮೆದುಳಿನ ಆರೋಗ್ಯಕ್ಕೆ ಕೂಡ ಗೋಡಂಬಿ ಹಾಲು ತುಂಬಾ ಒಳ್ಳೆಯದು. ನೈಸರ್ಗಿಕವಾಗಿ ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಮನಸ್ಸಿಗೆ ಒತ್ತಡಕ್ಕೆ ಸಂಬಂಧಪಟ್ಟಂತೆ ಇರುವ ಕಾರ್ಟಿಸೋಲ್ ಹಾರ್ಮೋನನ್ನು ನಿಯಂತ್ರಣ ಮಾಡುತ್ತದೆ. ಮನಸ್ಸಿಗೆ ಸಾಕಷ್ಟು ನೆಮ್ಮದಿ ಮತ್ತು ವಿಶ್ರಾಂತಿಯನ್ನು ಕೊಡುತ್ತದೆ. ನಿಮಗೆ ಒಂದು ವೇಳೆ ಹಾಲಿನಲ್ಲಿ ಗೋಡಂಬಿ ಬೀಜಗಳನ್ನು ಹಾಕಿ ಕುಡಿಯಲು ಆಗಲಿಲ್ಲ ಎಂದರೆ ಸಂಜೆಯ ಸ್ನಾಕ್ಸ್ ಸಮಯದಲ್ಲಿ ಗೋಡಂಬಿ ಬೀಜಗಳನ್ನು ಹಾಗೆ ತಿನ್ನಬಹುದು ಅಥವಾ ಹುರಿದು ತಿನ್ನಬಹುದು.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.