ಬೆಂಗಳೂರು: ಕಟ್ಟಡದ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ಯಾಟರಾಯನಪುರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ.
ಮೃತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಕಾಮರ್ಸ್ ಓದುತ್ತಿದ್ದು, ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧ ಎಂಬುವವರ ಜೊತೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಿದ್ದಳು. ಕಳೆದ ಒಂದು ವಾರದಿಂದ ಡಿಪ್ರೇಷನ್ ನಲ್ಲಿದ್ದ ವಿಜಯಲಕ್ಷ್ಮಿ. ಇದೇ 19ನೇ ತಾರೀಖು ಕಾಲೇಜಿಗೆ ಹೊಗೊದಾಗಿ ಮನೆಯಿಂದ ಹೋಗಿದ್ದಳು. ಸೆ.21ರಂದು ಸಾವನಪ್ಪಿದ್ದಾಳೆ.
ಇನ್ನು ಅಲ್ಲಿಯವರೆಗೂ ಆಕೆ ಎಲ್ಲಿಗೆ ಹೋಗಿದ್ದಳು ಎಂಬ ಮಾಹಿತಿ ತಾಯಿಗೆ ಇರಲಿಲ್ಲ. ಸ್ನೇಹಿತರ ಜೊತೆ ಹೊಗಿರಬಹುದು ಎಂದು ಭಾವಿಸಿದ್ದ ತಾಯಿ. ಒಂದು ದಿನ ಕಳೆದ ಬಳಿಕ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಅದರಂತೆ ಜ್ಞಾನಭಾರತಿ ಠಾಣೆಗೆ ತೆರಳಿ ದೂರು ನೀಡಲು ಹೊದಾಗ ಸಾವಿನ ಸುದ್ದಿ ತಿಳಿದಿದೆ. ಘಟನೆ ಸಂಬಂಧ ತಾಯಿ ದೂರಿನ ಮೇರೆಗೆ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
ಸಚಿವರ ಆಪ್ತನ ಮನೆಯಲ್ಲಿ ಕಂತೆ ಕಂತೆ ಹಣಪತ್ತೆ…
ಕೆಂಪು ದಾಸವಾಳದ ಪ್ರಯೋಜನಗಳು…
ತೆರೆ ಮೇಲೆ ಬರಲಿದೆ ತಲೈವ ಜೀವನ…!
ಕಲ್ಯಾಣ್ ಜುವೆಲರ್ಸ್ ಅಂಗಡಿಯಲ್ಲಿAC ಬ್ಲಾಸ್ಟ್
ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ…
ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮಹಿಳೆಯರು..
ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.