ಬೆಂಗಳೂರು: ಕೆಲಸ ಅರಸಿ ನಗರಕ್ಕೆ ಬಂದ ಒಂದೇ ದಿನದಲ್ಲಿ ಯುವಕನೋರ್ವ ಪಿ.ಜಿ. ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದ ಪಿ.ಜಿ. ಯೊಂದರಲ್ಲಿ ವಾಸ್ತವ್ಯ ಹೂಡಿದ್ದ ಅರುಣ್ ಕುಮಾರ್ (28) ಸಾವನ್ನಪ್ಪಿದವ.
ಕಲಬುರಗಿ ಮೂಲದ ಅರುಣ್ ಕೆಲಸ ಅರಸಿ ನಿನ್ನೆ ಬೆಂಗಳೂರಿಗೆ ಬಂದಿದ್ದ. ಇಂದು ಬೆಳಗ್ಗೆ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತನ ಪೋಷಕರಿಗೆ ವಿಷಯ ತಿಳಿಸಲಾಗಿದ್ದು, ಅವರು ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ. ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.