ಮನೆ ಅಪರಾಧ ಬೆಂಗಳೂರು: ತೆರಿಗೆ ವಂಚನೆ ಆರೋಪ – ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಆರೋಪ – ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ

0

ಬೆಂಗಳೂರು: ತೆರಿಗೆ ವಂಚನೆ ಮತ್ತು ವಹಿವಾಟಿನ ನೈಜ ಮಾಹಿತಿ ಮುಚ್ಚಿಟ್ಟಿರುವ ಆರೋಪದ ಮೇಲೆ ನಗರದ ವಿವಿಧೆಡೆ ಚಿನ್ನಾಭರಣ ಮಳಿಗೆಗಳ ಮೇಲೆ ಮಂಗಳವಾರ  ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಲವು ಪ್ರಮುಖ ಬ್ರ್ಯಾಂಡ್‌’ನ ಚಿನ್ನಾಭರಣ ಮಳಿಗೆಗಳಲ್ಲಿ ಶೋಧ ನಡೆಯುತ್ತಿದೆ. ಚಿಕ್ಕಪೇಟೆ, ಜಯನಗರ, ಬಸವನಗುಡಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ 25ಕ್ಕೂ ಹೆಚ್ಚು ಮಳಿಗೆಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಪೊಲೀಸ್‌ ಭದ್ರತೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಎಲ್ಲ ಮಳಿಗೆಗಳ ಪ್ರವೇಶ ದ್ವಾರಗಳನ್ನು ಮುಚ್ಚಿ, ಲೆಕ್ಕಪತ್ರ, ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹಿಂದಿನ ಲೇಖನಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಮಠಕ್ಕೆ ಅನುದಾನ ನೀಡುವಾಗ ಸರ್ಕಾರ ಷರತ್ತು ವಿಧಿಸಿತ್ತೇ? ಹೈಕೋರ್ಟ್ ಪ್ರಶ್ನೆ
ಮುಂದಿನ ಲೇಖನಕಾರ್ಕಳ: ಲಾರಿ ಚಾಲಕನ ಹತ್ಯೆ