ಬೆಂಗಳೂರು: ಹೃದಯಾಘಾತದಿಂದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ನಡೆದಿದೆ.
ತಿಮ್ಮೇಶ್ ಮೃತ ವ್ಯಕ್ತಿ.
ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಹೃದಯಾಘಾತದಿಂದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಿಮ್ಮೇಶ್ ಟೀ ಕುಡಿಯಲು ಆಟೋ ನಿಲ್ಲಿಸಿ ತೆರಳುತ್ತಿದ್ದನು. ಆಟೋದಿಂದಲೇ ಇಳಿಯುವಾಗ ಎದೆ ನೋವು ಕಾಣಿಸಿಕೊಂಡಿತ್ತು . ಎದೆಯನ್ನ ಸಾವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಂಪಂಗಿ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.