ಮನೆ ಅಪರಾಧ ಬೆಂಗಳೂರು: ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಸಾವು

ಬೆಂಗಳೂರು: ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಸಾವು

0

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ಬುಧವಾರ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಮೃತಪಟ್ಟಿದ್ದಾನೆ.

Join Our Whatsapp Group

ಭುವನ್ (4) ಮೃತಪಟ್ಟ ಬಾಲಕ.

ಅಣ್ಣನ ಜತೆ ಐಸ್ ​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್​ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.

ವಾಟರ್ ಟ್ರ್ಯಾಕ್ಟರ್​​ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಮಧ್ಯಾಹ್ನದ ಊಟ ಸೇವಿಸಿ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಮುಂದಿನ ಲೇಖನರಸ್ತೆ ಬದಿ ಹಾಕಿದ್ದ ಕಬ್ಬಿಣದ ಬಾರ್’ಗೆ ಬೈಕ್  ಡಿಕ್ಕಿ: ಸವಾರ ಸಾವು