ಮನೆ ಕಾನೂನು ಬೆಂಗಳೂರು: ಆಹಾರ ಉದ್ಯಮಗಳ‌ ಮೇಲೆ ಐಟಿ ದಾಳಿ‌- ಕಡತಗಳ ಪರಿಶೀಲನೆ

ಬೆಂಗಳೂರು: ಆಹಾರ ಉದ್ಯಮಗಳ‌ ಮೇಲೆ ಐಟಿ ದಾಳಿ‌- ಕಡತಗಳ ಪರಿಶೀಲನೆ

0

ಬೆಂಗಳೂರು: ಜ್ಯುವೆಲ್ಲರಿ‌ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ‌ ಮೇಲೆ‌ ಇತ್ತೀಚೆಗೆ  ದಾಳಿ ನಡೆಸಿದ್ದು ಆದಾಯ ತೆರಿಗೆ ಇಲಾಖೆ (ಐಟಿ), ಇಂದು ಆಹಾರ ಉದ್ಯಮಗಳ‌ ಮೇಲೆ ದಾಳಿ‌ ನಡೆಸಿ‌, ಕಡತಗಳ ಪರಿಶೀಲನೆ ನಡೆಸುತ್ತಿದೆ.

ರಾಜಾಜಿನಗರದ ಇಂಡಸ್ಟ್ರಿಯಲ್‌ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್​ ಎಲ್ ​ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ.

ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ‌‌. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹಿಂದಿನ ಲೇಖನಆಸ್ತಿಗಾಗಿ ಪತ್ನಿ ಕೊಲೆ: ಮಂಡ್ಯ ಖಾಸಗಿ ಕಾಲೇಜು ಉಪನ್ಯಾಸಕನ ಬಂಧನ
ಮುಂದಿನ ಲೇಖನನಿಜ್ಜರ್ ಹತ್ಯೆ: ಕೆನಡಾ ಮೊದಲು ಸಾಕ್ಷ್ಯ ಕೊಡಲಿ ಎಂದ ಎಸ್.ಜೈಶಂಕರ್