ಮನೆ ರಾಜಕೀಯ ಭಗತ್ ಸಿಂಗ್, ನಾರಾಯಣಗುರು ಪಠ್ಯ ಕೈಬಿಟ್ಟಿಲ್ಲ‌: ಪ್ರತಾಪ್‌ ಸಿಂಹ ಸ್ಪಷ್ಟನೆ

ಭಗತ್ ಸಿಂಗ್, ನಾರಾಯಣಗುರು ಪಠ್ಯ ಕೈಬಿಟ್ಟಿಲ್ಲ‌: ಪ್ರತಾಪ್‌ ಸಿಂಹ ಸ್ಪಷ್ಟನೆ

0

ಮೈಸೂರು(Mysuru): ಪಠ್ಯಪುಸ್ತಕದಿಂದ ಭಗತ್ ಸಿಂಗ್ ಮತ್ತು ನಾರಾಯಣಗುರು ಅವರ ಪಠ್ಯವನ್ನು ಕೈಬಿಟ್ಟಿಲ್ಲ‌ ಎಂದು ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ ನೀಡಿದರು.

ಕಾಂಗ್ರೆಸ್‌ಗೆ ದಿಢೀರನೆ ಭಗತ್ ಸಿಂಗ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಬಂತೋ ಗೊತ್ತಾಗುತ್ತಿಲ್ಲ. ಭಗತ್ ಸಿಂಗ್ ಪಠ್ಯ ಮುಂದುವರೆದಿದೆ. ನಾರಾಯಣಗುರು ಅವರ ಪಠ್ಯ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ವರ್ಗಾವಣೆಯಾಗಿದೆ ಎಂದರು.

ಆರ್​ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಗಡೆವಾರ್ ಅವರ ಪಠ್ಯ ಯಾಕಿರಬಾರದು. ಅವರು ದೇಶಪ್ರೇಮದ ಬಗ್ಗೆ ಮಾಡಿದ ಭಾಷಣ ಮಕ್ಕಳಿಗೆ ಸ್ಪೂರ್ತಿಯಾಗಲು ಪಠ್ಯದಲ್ಲಿ ಅಳವಡಿಸಿದ್ದೇವೆ. ಅದರಲ್ಲಿ ತಪ್ಪೇನಿದೆ?. ಚಕ್ರವರ್ತಿ ಸೂಲಿಬೆಲೆ ಒಬ್ಬ ಶ್ರೇಷ್ಠ ವಾಗ್ಮಿ. ಅವರು ರಚಿಸಿದ ಪಠ್ಯ ಮಕ್ಕಳಲ್ಲಿ ದೇಶಭಕ್ತಿ ತುಂಬಲಿದೆ. ಇದರಲ್ಲೂ ಕಾಂಗ್ರೆಸ್‌ನವರು ತಪ್ಪು ಹುಡುಕುವುದು ಹೇಗೆ? ಎಂದು ಕೇಳಿದರು.

ನಗರದ ರಸ್ತೆಗಳು ಗುಂಡಿಬಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಕೆಲ ಪಾಲಿಕೆ ಸದಸ್ಯರಿಗೆ ರಸ್ತೆ ಗುಂಡಿ‌ ಮುಚ್ಚುವ ಕನಿಷ್ಠ ಜ್ಞಾನವೂ ಇಲ್ಲ. ಗುಂಡಿಗಳಿಗೆ ಮಣ್ಣು ಹಾಕಿದ್ದಾರೆ, ಮಳೆಗೆ ಮತ್ತೆ ಮಣ್ಣು ಕೊಚ್ಚಿಹೋಗುತ್ತಿದೆ. ನಿಮ್ಮ ಮನೆಯ ರಸ್ತೆ ಸರಿ ಇಲ್ವಾ, ನೀರು ಬರ್ತಿಲ್ವಾ, ಕಸ ತೆಗೆದಿಲ್ವಾ? ಪಾಲಿಕೆ ಸದಸ್ಯರ ಮನೆ ಮುಂದೆ ಧರಣಿ ಕೂತುಕೊಳ್ಳಿ. ಆಗ ಅವರೇ ರಸ್ತೆಗೆ ಬಂದು ಕೆಲಸ‌ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಲೇಖನದಕ್ಷಿಣ ಪದವೀಧರರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ನಾಮಪತ್ರ ಸಲ್ಲಿಕೆ
ಮುಂದಿನ ಲೇಖನಸಿದ್ದರಾಮಯ್ಯ ಅವರ ಹೇಳಿಕೆ ಚುನಾವಣೆ ಗಿಮಿಕ್: ಶೋಭಾ ಕರಂದ್ಲಾಜೆ ಟೀಕೆ