ಮನೆ ಅಪರಾಧ ಬೀದರ್: ಬಿಜೆಪಿ ಮುಖಂಡನ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ

ಬೀದರ್: ಬಿಜೆಪಿ ಮುಖಂಡನ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ

0

ಬೀದರ್: ಜಿಲ್ಲಾ ಪಂಚಾಯತ್’ನ ಮಾಜಿ‌ ಸದಸ್ಯೆಯ ಪತಿ‌ ಹಾಗೂ ಬಿಜೆಪಿ ಮುಖಂಡನ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಲ್ಲಿನ ಬಸವ ಕಲ್ಯಾಣದಲ್ಲಿ ನಡೆದಿದೆ.

ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಈರಣ್ಣ ಹಲಗೆ ಗಂಭೀರವಾಗಿ ಗಾಯಗೊಂಡವರು.

ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಅಮರಪಲ್ಲಿ ಈರಣ್ಣ ಹಲಗೆ ಪತಿ‌ ಮೇಲೆ ನಗರದ ಪಂಜಾಬಿ ಡಾಬಾ ಬಳಿ ನಾಲ್ಕು‌ ಜನ ಅಪರಿಚಿತರ ತಂಡ ಏಕಾಏಕಿ ಮಾರಣಾಂತಿಕವಾಗಿ ಹಲ್ಲೆಗೆ ಯತ್ನಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬಸವ ಕಲ್ಯಾಣ ನಗರ ಪೊಲೀಸ್​​ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಸಂಬಂಧ ಬಸವ ಕಲ್ಯಾಣ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನರಣಜಿ ಟ್ರೋಫಿ ಫೈನಲ್ ಪಂದ್ಯ: ಸಾಧಾರಣ ಮೊತ್ತಕ್ಕೆ ಕುಸಿದ ಬಂಗಾಳ ತಂಡ
ಮುಂದಿನ ಲೇಖನನಗೆಹನಿ