ಬೆಂಗಳೂರು: ತಾನೊಬ್ಬ ಮೂಕ ಮತ್ತು ಕಿವುಡ ಎಂದು ಹೇಳಿಕೊಂಡ ಯುವಕನೊರ್ವ ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೂರು ಬರುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳು ಆತನ ಮೇಲೆ ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸಿದ್ದಾರೆ.
ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತನೇ ಮೆಟ್ರೋ ರೈಲಿನ ಒಳಗಡೆ ಭಿಕ್ಷೆ ಬೇಡುತ್ತಿದ್ದ ಯುವಕ.
ಮೂಲದ ಮಲ್ಲಿಕಾರ್ಜುನ್ ಹಸಿರು ಮಾರ್ಗದಲ್ಲಿ ಬರುವ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ 150 ಕೊಟ್ಟು ಒಂದು ದಿನದ ಕಾರ್ಡ್ ತೆಗೆದುಕೊಂಡಿದ್ದ. ಯಶವಂತಪುರ ನಿಲ್ದಾಣದಿಂದ ನಾಗಸಂದ್ರ ಕಡೆಗೆ ಹೊರಟಿದ್ದ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾನೆ. ರೈಲಿನಲ್ಲಿ ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ‘ನಾನು ಮೂಗ ಹಾಗೂ ಕಿವುಡ, ಸಹಾಯ ಮಾಡಿ’ ಎಂದು ಬರೆದಿದ್ದ ಚೀಟಿಗಳನ್ನು ಕೊಟ್ಟು ಭಿಕ್ಷೆ ಬೇಡಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ಮೆಟ್ರೋ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಭದ್ರತೆ ಸಿಬ್ಬಂದಿ ಎಲ್ಲಾ ನಿಲ್ದಾಣಗಳಿಗೂ ಈ ಬಗ್ಗೆ ಅಲರ್ಟ್ ಮಾಡಿದ್ದರು.
ಸುಮಾರು ಒಂದು ಗಂಟೆ ಬಳಿಕ ಯಶವಂತಪುರಕ್ಕೆ ಹೊರಗೆ ಬರುವಾಗ ಆತನನ್ನು ತಡೆಯಲಾಯಿತು. ಬಳಿಕ ಬಿಎಂಆರ್ ಸಿಎಲ್ ಸಿಬ್ಬಂದಿ ಮಲ್ಲಿಕಾರ್ಜುನ್ ನನ್ನು ತಾವೇ ಮಲ್ಲೇಶ್ವರ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಆತ ಕಿವುಡ, ಮೂಗನಾಗಿರುವುದು ದೃಢಪಟ್ಟಿದೆ.
ಆದರೆ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುವುದಕ್ಕೆ ಅವಕಾಶವಿಲ್ಲ. ಹಾಗೇ ಪ್ರಯಾಣಿಕರಿಗೆ ತೊಂದರೆ ಮಾಡಿದ್ದಕ್ಕೆ 500 ರೂ. ದಂಡ ವಿಧಿಸಲಾಗಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.