ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಗುಜರಾತ್ ಕೋಮುಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ತನ್ನ ಕುಟುಂಬದ ಸದಸ್ಯರನ್ನು ಕೊಂದ 11 ಅಪರಾಧಿಗಳ ಶಿಕ್ಷೆ ತಗ್ಗಿಸಿ, ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ನಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿಗಳಾದ ಅಜಯ್ ರಾಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಬಳಿಕ ನ್ಯಾ. ಬೇಲಾ ವಿಚಾರಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದರು.
ಗುಜರಾತ್’ನಲ್ಲಿ 2002ರಲ್ಲಿ ನಡೆದ ಕೋಮುಗಲಭೆ ವೇಳೆ ದಹೋಡ್ ಜಿಲ್ಲೆಯ ಲಿಮ್’ಖೆಡಾ ತಾಲ್ಲೂಕಿನಲ್ಲಿ ಬಾನೋ ಅವರ ಮೇಲೆ ಗಲಭೆಕೋರರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿತ್ತು. ಅಲ್ಲದೆ ಇದೇ ವೇಳೆ ಗಲಭೆಕೋರರ ಗುಂಪು ಹನ್ನೆರಡು ಜನರನ್ನು ಹತ್ಯೆಗೈದಿತ್ತು. ಇದರಲ್ಲಿ ಬಾನೋ ಅವರ ಮೂರು ವರ್ಷದ ಮಗಳು ಕೂಡ ಸೇರಿದ್ದಳು.
ಪ್ರಕರಣದ ಹಿನ್ನೆಲೆ:
ಬಾನೋ ಅವರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಪರಾಧಿ ರಾಧೇಶ್ಯಾಮ್ ಭಗವಾನ್’ದಾಸ್ ಶಾ ಅಲಿಯಾಸ್ ಲಾಲಾ ವಕೀಲ್ ಎಂಬಾತ ತಮ್ಮನ್ನು ಅಪರಾಧ ಘಟಿಸಿದ ಜುಲೈ 9, 1992ರ ಸಂದರ್ಭದಲ್ಲಿ ಗುಜರಾತ್ ರಾಜ್ಯದಲ್ಲಿ ಇದ್ದ ನೀತಿಯಡಿ ಸನ್ನಡತೆಯ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡುವಂತೆ ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇದಕ್ಕೂ ಮೊದಲು ಅವರು ಶಿಕ್ಷೆ ತಗ್ಗಿಸಲು ಕೋರಿ ಗುಜರಾತ್ ಹೈಕೋರ್ಟ್’ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು. ಮಹಾರಾಷ್ಟ್ರದಲ್ಲಿ ಪ್ರಕರಣದ ವಿಚಾರಣೆ ನಡೆದಿರುವುದರಿಂದ ಅವಧಿಪೂರ್ವ ಬಿಡುಗಡೆ ಮನವಿ ಸಹ ಮಹಾರಾಷ್ಟ್ರದಲ್ಲಿಯೇ ಸಲ್ಲಿಕೆಯಾಗಬೇಕು ಎಂದು ಗುಜರಾತ್ ಹೈಕೋರ್ಟ್ ಹೇಳಿ ಮನವಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಪ್ರಕರಣವನ್ನು ಅಲಿಸಿದ್ದ ಸುಪ್ರೀಂ ಕೋರ್ಟ್ ಮೇ 13 ರಂದು ತನ್ನ ಆದೇಶದಲ್ಲಿ ಅಪರಾಧ ನಡೆದ ರಾಜ್ಯದಲ್ಲಿ ಆ ಸಮಯದಲ್ಲಿ ಅಸ್ತಿತ್ವದಲ್ಲಿದ್ದ ನೀತಿಯಂತೆ ಅಪರಾಧಿಗಳ ಬಿಡುಗಡೆಯನ್ನು ಪರಿಗಣಿಸಬೇಕು ಎಂದು ಹೇಳಿತ್ತು.
ಇದರ ಅನುಸಾರ ಗುಜರಾತ್ ಸರ್ಕಾರ ಬಾನೋ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿಯನ್ನು ಬಿಡುಗಡೆ ಮಾಡಿತು. ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸುಪ್ರೀಂಕೋರ್ಟ್’ನಲ್ಲಿ ಪ್ರಸಕ್ತ ಅರ್ಜಿ ಸಲ್ಲಿಸಿದ್ದಾರೆ.