ಮನೆ ಅಪರಾಧ ವಿಶ್ವೇಶ್ವರಯ್ಯ ಜಲ ನಿಗಮದಿಂದ ಬಿಲ್​ ಬಾಕಿ: ಆತ್ಮಹತ್ಯೆ ಬೆದರಿಕೆ ಹಾಕಿದ ಗುತ್ತಿಗೆದಾರ

ವಿಶ್ವೇಶ್ವರಯ್ಯ ಜಲ ನಿಗಮದಿಂದ ಬಿಲ್​ ಬಾಕಿ: ಆತ್ಮಹತ್ಯೆ ಬೆದರಿಕೆ ಹಾಕಿದ ಗುತ್ತಿಗೆದಾರ

0

ತುಮಕೂರು: ಪಾವಗಡದ ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

Join Our Whatsapp Group

ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಎಸ್​​​ಸಿಪಿ ಅಡಿ ರಸ್ತೆ ಹಾಗೂ ಚೆಕ್ ಡ್ಯಾಮ್​​ ಗಳನ್ನು ನಿರ್ಮಾಣ ಮಾಡಿಸಿದ್ದಾರೆ.

ಆದರೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಕಾಮಗಾರಿ ಸರಿಯಾಗಿ ಆಗಿಲ್ಲ ಎಂದು ಖುದ್ದು ತಾವೇ ತನಿಖೆ ನಡೆಸಿದ್ದರು. ಆದರೆ ತನಿಖೆಯಲ್ಲಿ ಕಾಮಗಾರಿ ಸರಿಯಾಗಿ ಆಗಿದೆ ಎಂದು ಸಾಬೀತಾಗಿದೆ. ಆದರೂ ಕೂಡ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಅವರು ಪ್ರಥಮದರ್ಜೆ ಗುತ್ತಿಗೆದಾರ ಸುಜಿತ್ ಅವರ 45 ಲಕ್ಷ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಮಾಡಿಲ್ಲ. ನಾನು ಎಸ್​ಸಿ ಆದ ಕಾರಣ ನನ್ನನ್ನು ತುಳಿಯುತ್ತಿದ್ದಾರೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಪ್ಪ ಅವರೇ ಕಾರಣ. ಸಣ್ಣಚಿತ್ತಪ್ಪ ಅವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಪ್ರಥಮದರ್ಜೆ ಗುತ್ತಿಗೆದಾರ ಸುಜೀತ್ ಹೇಳಿದ್ದಾರೆ.

ಹಿಂದಿನ ಲೇಖನಮಂಡ್ಯ: ಕೌಟುಂಬಿಕ ಕಲಹ, ದಂಪತಿಗಳು ನೇಣಿಗೆ ಶರಣು
ಮುಂದಿನ ಲೇಖನಚುನಾವಣಾ ಗೆಲುವು: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ವಿಶ್ವ ನಾಯಕರು