ಉಡುಪಿ: ಲೇಖಕ ರೋಹಿತ್ ಚಕ್ರತೀರ್ಥ ವಿರುದ್ಧ ಬಿಲ್ಲವ ಸಂಘಟನೆಗಳ ಮುಖಂಡರು ಶನಿವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ನಗರಕ್ಕೆ ರೋಹಿತ್ ಚಕ್ರತೀರ್ಥ ಆಗಮಿಸಿದ್ದರು.
ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟು ಗುರುಗಳಿಗೆ ಹಾಗೂ ಬಿಲ್ಲವ ಸಮಾಜಕ್ಕೆ ರೋಹಿತ್ ಚಕ್ರತೀರ್ಥ ಅವಮಾನ ಮಾಡಿದ್ದು ಸಮ್ಮೇಳನದಲ್ಲಿ ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಸಮ್ಮೇಳನ ನಡೆಯುವ ಸ್ಥಳದ ಕಡೆಗೆ ಹೊರಟ ಪ್ರತಿಭಟನಾಕಾರರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ತಡೆದರು. ಈ ಸಂದರ್ಭ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು.
ಈ ಸಂದರ್ಭ ಮಾತನಾಡಿದ ಗೆಜ್ಜೆಗಿರಿ ಮೇಳದ ಜಿಲ್ಲಾ ಸಂಚಾಲಕ ನವೀನ್ ಅಮೀನ್ ಜಗತ್ತಿಗೆ ಮಾನವತೆಯ ಸಂದೇಶ ಸಾರಿದ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟಿರುವ ರೋಹಿತ್ ಚಕ್ರತೀರ್ಥಗೆ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣಕ್ಕೆ ಅವಕಾಶ ನೀಡಿದರೆ ಮುಂದೆ ಮತ್ತಷ್ಟು ಮಾರಕ ಬರಹಗಳನ್ನು ಪಠ್ಯದಲ್ಲಿ ತುಂಬುವ ಅಪಾಯವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಮಾತನಾಡಿ, ನಾರಾಯಣ ಗುರುಗಳಿಗೆ ಮಾತ್ರವಲ್ಲ; ನಾಡಗೀತೆಗೂ ಅವಮಾನ ಮಾಡಿದ ವ್ಯಕ್ತಿಯನ್ನು ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಲು ಕರೆತಂದಿರುವುದು ಖಂಡನೀಯ ಎಂದರು.
ಮುಖಂಡರಾದ ಸುನೀಲ್ ಬಂಗೇರ, ಮಾಧವ ಬನ್ನಂಜೆ, ದೀಪಕ್ ಕೋಟ್ಯಾನ್ ಸೇರಿದಂತೆ ಹಲವು ಸಮಾಜದ ಮುಖಂಡರು ಇದ್ದರು.
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
ರಾಮ್ ಲಲ್ಲಾನಿಗೆ ನಡೆಯುತ್ತಿದೆ ಅಯೋಧ್ಯೆಯಲ್ಲಿ ಅಭಿಷೇಕ.
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ…
ಬೋರ್ನ್ವಿಟಾ ಆರೋಗ್ಯಕ್ಕೆ ಹಾನಿಕಾರವೇ ?
BJP ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ…
ಭಾರತದಲ್ಲಿ ಏರಿಕೆಯಾದ ಶ್ರೀಮಂತರ ಸಂಖ್ಯೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.