ಮನೆ ರಾಜ್ಯ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ

0

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಬಿಜೆಪಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆದರೆ, ಅದನ್ನು ಪರೀಕ್ಷಿಸುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಆದರೆ ಏನು ನಡೆದಿಲ್ಲ ಎಂದು ಅವರು ಹೇಳುತ್ತಿದ್ದು, ತನಿಖೆಗೂ ಮುನ್ನವೇ ಕ್ಲಿನ್ ಚೀಟ್ ನೀಡಿದ್ದಾರೆ. ಈ ಪ್ರಕರಣವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.

ಹಿಂದಿನ ಲೇಖನಕೇವಲ ಓಟಿಗಾಗಿ ಸಂವಿಧಾನ ಆಪತ್ತಿ‌ನಲ್ಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ: ವಿ ಶ್ರೀನಿವಾಸ್ ಪ್ರಸಾದ್
ಮುಂದಿನ ಲೇಖನವಿತ್ತೀಯ ಶಿಸ್ತು ಪಾಲನೆಯ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ