ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಬಿಜೆಪಿ – ಕಾಂಗ್ರೆಸ್ ಟಿಪ್ಪು ಹೆಸರಲ್ಲಿ ರಾಜಕೀಯ ಮಾಡುತ್ತಿವೆ. ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯಗೆ ಟಿಪ್ಪು ಜಯಂತಿ ಬೇಡ, ಟಿಪ್ಪು ಜಯಂತಿ ಅಗತ್ಯವೂ ನಮಗಿಲ್ಲ ಎಂದು ನಾನು ಅಂದೇ ಹೇಳಿದ್ದೆ. ಆದರೆ, ಅವರು ಕೇಳಲಿಲ್ಲ ಎಂದರು.
ಟಿಪ್ಪು ಪ್ರತಿಮೆ ಸ್ಥಾಪನೆ ಸಂಬಂಧ ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಸಮುದಾಯದಲ್ಲಿ ಪ್ರತಿಮೆ, ಮೂರ್ತಿ ಎಂಬುದಿಲ್ಲ. ಹೀಗಾಗಿ ಟಿಪ್ಪು ಪ್ರತಿಮೆ ನಿರ್ಮಿಸುವ ಪ್ರಶ್ನೆಯೇ ಇಲ್ಲ. ರಾಜಕೀಯಕ್ಕಾಗಿ ಧರ್ಮ ಬಳಸಿಕೊಳ್ಳಬಾರದು. ತನ್ವೀರ್ ಸೇಠ್ ಪ್ರತಿಮೆ ನಿರ್ಮಿಸುತ್ತೇನೆಂದೂ ಮುಂದಾದರೆ ಅವನಿಗೂ ಉಸ್ಮಾನಿಗಳಿಂದ ಮಾಹಿತಿ ಪಡೆದು ಮಾತನಾಡುವಂತೆ ಹೇಳುತ್ತೇನೆ. ನಮ್ಮ ಇಸ್ಲಾಂ ಧರ್ಮದಲ್ಲಿ ಜಗತ್ತಿನ ಯಾವ ಭಾಗದಲ್ಲೂ ಎಲ್ಲಿಯೂ ಪ್ರತಿಮೆ ನಿರ್ಮಿಸಿಲ್ಲ. ಹೀಗಾಗಿ ನಾವು ಟಿಪ್ಪು ಪ್ರತಿಮೆ ನಿರ್ಮಿಸಲ್ಲ ಎಂದರು.
ಹಿಂದೂ- ಮುಸ್ಲಿಂರು ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದಾರೆ. ಆದರೆ, ಬಿಜೆಪಿಯವರು ಹುಳಿ ಹಿಂಡುತ್ತಿದ್ದಾರೆ. ಸಂಸದ ಪ್ರತಾಪಸಿಂಹ ಅಭಿವೃದ್ಧಿ ಕೆಲಸ ಮಾಡದೇ, ಧರ್ಮಗಳ ನಡುವೆ ಕಿತ್ತಾಡುವಂತೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಇಬ್ರಾಹಿಂ ಕಿಡಿಕಾರಿದರು.
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದಾಗ, ಮೈಸೂರು ಅಥವಾ ಕೋಲಾರದಲ್ಲಿ ಟಿಪ್ಪು ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.
ಟಿಪ್ಪು ನೈಜ ಕನಸುಗಳ ವಿರುದ್ಧ ಕೋರ್ಟ್ಗೆ: ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಟಿಪ್ಪ ನೈಜ ಕನಸು ಪುಸ್ತಕದಲ್ಲಿ ಇಷ್ಟಬಂದಂತೆ ಬರೆದಿದ್ದಾರೆ. ಈ ಸಂಬಂಧ ನಾವು ಕೋಟ್೯ಗೆ ಹೋಗುತ್ತೇವೆ ಎಂದರು.