ಮನೆ ರಾಜಕೀಯ ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು: ಸಿದ್ದರಾಮಯ್ಯ

ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು: ಸಿದ್ದರಾಮಯ್ಯ

0

ಬೆಂಗಳೂರು(Bengaluru): ನಾವು ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಬಿಜಪಿಯವರು ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ.  ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಡರ್ಟಿ ಪಾಲಿಟಿಕ್ಸ್ ಎಂದು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರು,  ಗಾಂಧಿ ಕೊಂದವರನ್ನು ಬಿಜೆಪಿಯವರು ಆರಾಧನೆ ಮಾಡುತ್ತಾರೆ.  ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ.  ಭ್ರಷ್ಟಾಚಾರ ಮಾಡುತ್ತಿದ್ದೀರಿ ಅಂತಾ ಹೇಳಿದವು.  ಅದು ಡರ್ಟಿ ಪಾಲಿಟಿಕ್ಸಾ..? ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೋದ ಕಡೆ ಬಿಜೆಪಿ ಸೋತಿಲ್ವಾ?, ಪಂಜಾಬ್, ತೆಲಂಗಾಣ, ಕೇರಳದಲ್ಲಿ ಬಿಜೆಪಿ ಸೋತಿರುವುದನ್ನ ನಾವು ಕಂಡಿದ್ದೇವೆ ಎಂದು ವ್ಯಂಗ್ಯವಾಡಿದರು.

ರಾಜ್ಯಕ್ಕೆ ರಾಹುಲ್ ಗಾಂಧಿ ಬಂದರೆ ಬಿಜೆಪಿಗೆ ಲಾಭ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಪಂಜಾಬ್, ತೆಲಂಗಾಣ, ಕೇರಳಕ್ಕೆ ಪ್ರಧಾನಿ ನರೇಂದ್ರ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಅವರು ಕೂಡ ಸೋಲ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ನೀಡುತ್ತಿರುವ ಹೇಳಿಕೆ ಎಂದು ಲೇವಡಿ ಮಾಡಿದರು.

ರಾಜಕಾರಣದಲ್ಲಿ ನಾನು ಕರ್ಣನಿದ್ದಂತೆ ಎಂಬ ಸಿಎಂ‌ ಹೇಳಿಕೆ ಬಗ್ಗೆ, ಭಂಡರು ಮಾತ್ರ ಆ ರೀತಿ ಮಾತನಾಡುವುದು. ಟೀಕೆಗೂ, ನಮಗೂ ಸಂಬಂಧವಿಲ್ಲ ಎನ್ನುವವರು ಹಾಗೆ ಹೇಳ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಲೇಖನಪೇಸಿಎಂ ಅಭಿಯಾನದಲ್ಲಿ ಯಾವುದೇ ಸಮುದಾಯವನ್ನು ಗುರಿಯಾಗಿಸಿಲ್ಲ: ದಿನೇಶ್ ಗುಂಡೂರಾವ್
ಮುಂದಿನ ಲೇಖನಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ