ಮನೆ ರಾಜಕೀಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಹೆಚ್ಡಿಕೆ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಹೆಚ್ಡಿಕೆ

0

ಹಾಸನ (Hassan)- ಬಿಜೆಪಿ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಟೀಕಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಸಾಕಷ್ಟು ತೊಂದರೆಗಳು ಆಗಿವೆ. ಹೀಗಿದ್ದರೂ ಬಿಜೆಪಿ ವರಿಷ್ಠ ನಾಯಕ ಅಮಿತ್ ಶಾ ಅವರು ನಿಮ್ಮ ಪಾಡಿಗೆ ನೀವು ಆಡಳಿತ ನಡೆಸಿ ಎಂದು ಹೇಳಿ ಹೋಗಿದ್ದಾರೆ. ಈ ನಾಡಿನಲ್ಲಿ ಏನೇ ಲೂಟಿ ಆದರು ನಮಗೆ ಸರ್ಕಾರ ತರುವುದು ಗೊತ್ತಿದೆ ಎಂದು ಹೇಳಿ ಹೋಗಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಏನೇನು ನಡೆದಿದೆ ಎಂದು ಪಟ್ಟಿ ಮಾಡಿ ಹೇಳುತ್ತೇನೆ. ಮಂಗಳೂರು ‌ಗೋಲೀಬಾರ್, ಬಾಂಬ್ ವಿಚಾರ, ಡ್ರಗ್ ವಿಚಾರ ಏನಾಯಿತು? ಯಾವುದೇ ಒಂದು ವಿಚಾರ ತಾರ್ಕಿಕ ಅಂತ್ಯ ಕಂಡಿಲ್ಲ, ಕಾಣುವುದೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಹಣ ಬೇರೆಡೆಗೆ ವರ್ಗ ಅಶ್ವತ್ಥನಾರಾಯಣ ವಿರುದ್ಧ ಆರೋಪ:

ಅಶ್ವತ್ಥನಾರಾಯಣ ಸಚಿವರಾಗಿ ಅನೇಕ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಪಿಂಚಣಿ ಕೊಡಲು ಇಟ್ಟಂತಹ 1,350 ಕೋಟಿ ರೂಪಾಯಿ  ದುಡ್ಡನ್ನು ಕಟ್ಟಡ ಕಟ್ಟಲು ಡೈವರ್ಟ್ ಮಾಡಿದ್ದಾರೆ. ಯಾರಿಗೆ ಕೆಲಸ ಕೊಟ್ಟಿದ್ದೀರಿ?  ಪಿಡಬ್ಲ್ಯೂಡಿ ಇಲಾಖೆಯಲ್ಲಿ ಎಂಜಿನಿಯರುಗಳು ಇರಲಿಲ್ಲವಾ? ಇಲಾಖೆಯಲ್ಲಿ ಎಬಿವಿಪಿ‌, ಆರ್.ಎಸ್.ಎಸ್. ನವರನ್ನು ಸಿಂಡೆಕೆಟ್ ಸದಸ್ಯರನ್ನಾಗಿ ಮಾಡಿಕೊಂಡು ಅಕ್ರಮ ನಡೆಸುತ್ತಿದ್ದಾರೆ. ಸರ್ಕಾರ ಕೇಳಿದರೆ ಏನು ಮಾಹಿತಿ ಬೇಕು ಕೊಡಲು ಅದನ್ನು ಕೊಡಲು ನಾನು ತಯಾರಿದ್ದೇನೆ ಎಂದರು.

ಪರೀಕ್ಷೆಗೆ ಮೊದಲು 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಸಿಕ್ಕಿದೆ. ಈ ಹಗರಣದ ತನಿಖೆ ಹಳ್ಳ ಹಿಡಿಯುತ್ತದೆ. ದುಡ್ಡು ಕೊಟ್ಟು ಬಂದವರು ಸರಿಯಾಗಿ ಕೆಲಸ ಮಾಡುತ್ತಾರಾ? ಎಂದು ಕಿಡಿ ಕಾರಿದ ಹೆಚ್ಡಿಕೆ ಅವರು, ಯಾವುದಾದರೂ  ಒಂದು ಇಲಾಖೆಯಲ್ಲಿ ಪ್ರಾಮಣಿಕವಾಗಿ ಕೆಲಸ ಮಾಡುವುದನ್ನು ತೋರಿಸಿ ಅಲ್ಲೆಲ್ಲಾ ದುಡ್ಡು ವಸೂಲಿ ಮಾಡುವಾಗ ತಡಿಲಿಕ್ಕೆ ನಾವು ಒಂದು ತಂಡವನ್ನು ಮಾಡಬೇಕಿದೆ. ದುಡ್ಡು ಸಮೇತ ದಾಖಲೆಗಳನ್ನು ಹಿಡಿಯಲು ಒಂದು ವಿಂಗ್ ರೆಡಿ ಮಾಡಬೇಕಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗಿದೆ. ಇವರ ಕಾಟ ತಡೆಯಲಾಗಿದೆ ಕೆಲ ಅಧಿಕಾರಿಗಳು ರಜೆ ಹಾಕಿ ಹೋಗಿದ್ದಾರೆ ಎಂದು ಹೆಚ್ಡಿಕೆ ದೂರಿದರು.

ಗೆಸ್ಟ್ ಹೌಸ್ ನಲ್ಲಿ ವ್ಯವಹಾರ:

ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಹಾರಾಷ್ಟ್ರ ಕೇಡರ್ ಅಧಿಕಾರಿ ಒಬ್ಬರನ್ನು ಕಮಿಷನರ್ ಆಗಿ ಇಟ್ಕೊಂಡಿದ್ದಾರೆ. ಗೆಸ್ಟ್ ಹೌಸ್‌ನಲ್ಲಿ ಕೂತು ಇವೆಲ್ಲ ವ್ಯವಹಾರ ಮಾಡಿದ್ದಾರೆ. ಎಲ್ಲೆಲ್ಲಿ ಗೆಸ್ಟ್ ಹೌಸ್ ಇದ್ಕಂಡು ಏನೇನ್ ಮಾಡ್ತಿದ್ದಾರೆ ಅಂತ ಗೊತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ವಿಭಾಗದ ಕಟ್ಟಡ ಕಟ್ಟಲು ಹಣ ಮಂಜೂರಿಗೆ ಉನ್ನತ ಶಿಕ್ಷಣ ಸಚಿವರು ಪತ್ರ ಬರೆದಿದ್ದಾರೆ. ಇದರಲ್ಲಿ 18 ಕೋಟಿಯಿಂದ 85 ಕೋಟಿಗೆ ಅಂದಾಜು ವೆಚ್ಚ ಹೆಚ್ಚಾಗಿದೆ. ಇದರಿಂದ ಶೇ.40 ಕಮಿಷನ್ ತೆಗೆದುಕೊಳ್ಳದೆ ಇನ್ನೇನು ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ‌ ನಿರಂತರ ಆಡಳಿತ ದುಷ್ಪರಿಣಾಮ ನಡೆಯುತ್ತಿದೆ. ಇದರಿಂದ ನಮ್ಮ ರಾಜ್ಯ ಎಲ್ಲಿಗೆ ಹೋಗಬಹುದು ಎಂದು ಭಯವಿದೆ. ಯಾರದ್ದೋ ಒಬ್ಬ ಮಂತ್ರಿಯ ತಲೆದಂಡದ ಬಗ್ಗೆ ನಾನು ಮಾತನಾಡುತ್ತಿಲ್ಲ. ನಾನು ಮೊದಲು ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ ಮಾಡಿದ್ದೆ. ಯಡಿಯೂರಪ್ಪನವರು ನಮ್ಮ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿದ್ದರು. ಜೆಡಿಎಸ್ ಪಕ್ಷ ಮತ್ತು ಅಪ್ಪ ಮಕ್ಕಳನ್ನು ಮುಗಿಸುವುದೇ ನನ್ನ ಗುರಿ ಎಂದಿದ್ದರು. ನಾನು ನನ್ನ ಕೊನೆಯ ಭಾಷಣದಲ್ಲಿ ಉತ್ತಮ ಕೆಲಸ ಮಾಡಿ ಎಂದಿದ್ದೆ. ಅಲ್ಲಿಂದ‌ ಇಲ್ಲಿವರೆಗೆ ಭ್ರಷ್ಟಾಚಾರದ‌ ಬಗ್ಗೆಯೂ ಚರ್ಚಿಸಿಲ್ಲ ಎಂದರು ಅವರು.

ಹಿಂದಿನ ಲೇಖನಬಿಜೆಪಿ ಭಾನುಪ್ರಕಾಶ್ ಪುತ್ರನಿದ್ದ ಕಾರಿನ ಮೇಲೆ ದಾಳಿ
ಮುಂದಿನ ಲೇಖನಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ