ಮನೆ ರಾಜಕೀಯ ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ: ರಾಹುಲ್ ಗಾಂಧಿ

ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ: ರಾಹುಲ್ ಗಾಂಧಿ

0

ದಾವಣಗೆರೆ(Davanagere): ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಸಾಮೂದಾಯಗಳು ಶಾಂತಿ, ಸಾಮರಸ್ಯದಿಂದ ಬಾಳುತ್ತಿದ್ದರು. ಯಾರಿಗೂ ಭಯವಿರಲಿಲ್ಲ. ಆದರೆ, ಈಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಅಶಾಂತಿ ನೆಲೆಸಿದೆ ಎಂದು ಆರೋಪಿಸಿದರು.

ಇಂದಿನ ಕರ್ನಾಟಕದಲ್ಲಿನ ಸಾಮರಸ್ಯದ ಬಗ್ಗೆ ಅಮೆರಿಕದಲ್ಲೂ ಚರ್ಚೆಯಾಗುತ್ತಿದ್ದು,  ಈಗ ಸರ್ವ ಧರ್ಮ, ಸಾಮರಸ್ಯ ಕಾಣುತ್ತಿಲ್ಲ ಎಂದು ಅಮೆರಿಕದ ಪ್ರಜೆಗಳು ಹೇಳುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸಾಮರಸ್ಯ ಮೂಡಿಸಿದರೆ ಬಿಜೆಪಿ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದರು.

ವ್ಯಾಪಕ ರೀತಿಯಲ್ಲಿ ವ್ಯಾಪಕ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಬಸವಣ್ಣನವರ ತತ್ವಕ್ಕೆ ವಿರುದ್ಧವಾಗಿ ಆಡಳಿತ ನಡೆಸಲಾಗುತ್ತಿದೆ. ನೋಟ್ ಅಮಾನ್ಯೀಕರಣ ಕೇಂದ್ರ ಸರ್ಕಾರದ ದೊಡ್ಡ ಸಾಧನೆ. ಇದರಿಂದಾಗಿ ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳು ನಾಶವಾದವು. ನೋಟ್ ಅಮಾನ್ಯೀಕರಣ, ಜಿಎಸ್ ಟಿ ಹೆಸರಿನಲ್ಲಿ ದೇಶಕ್ಕೆ ವಂಚನೆ ಮಾಡಿದ್ದಾರೆ. ಇದರ ಹಿಂದಿನ ಉದ್ದೇಶ ಕಾರ್ಮಿಕರು, ರೈತರು, ಸಂಪೂರ್ಣವಾಗಿ ನಾಶ ಮಾಡಿ, ಕೆಲವರನ್ನು ಉದ್ದಾರ ಮಾಡುವ ಯೋಜನೆಯಾಗಿದೆ ಎಂದರು. 

ಸಿದ್ದರಾಮಯ್ಯ  ಅವಧಿಯಲ್ಲಿ ಕ್ಷೀರಭಾಗ್ಯ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸಲಾಗಿತ್ತು. ಕರ್ನಾಟಕದ ಭಾಷೆ, ಸಂಸ್ಕೃತಿ, ಜೀವನದ ಬಗ್ಗೆ ಸಹಮತವಿದೆ. ಕರ್ನಾಟಕದ ಸಂಸ್ಕೃತಿ, ಉಳಿಸಿ, ಬೆಳೆಸಲು ಜನರ ಆಶೀರ್ವಾದ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. 

ಹಿಂದಿನ ಲೇಖನಕರ್ತವ್ಯದ ವೇಳೆ ಮೊಬೈಲ್ ಫೋನ್‌ನಲ್ಲಿ ಮಾತನಾಡುವುದು, ಬ್ರೌಸ್ ಮಾಡುವುದು ಕಂಡು ಬಂದ ಟ್ರಾಫಿಕ್ ಪೊಲೀಸರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದು: ಕೇರಳ ಹೈಕೋರ್ಟ್
ಮುಂದಿನ ಲೇಖನದೈಹಿಕ, ಮಾನಸಿಕವಾಗಿ ಸದೃಡವಾಗಿರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ