ಮನೆ ರಾಜ್ಯ ಬೊಮ್ಮಾಯಿ ಅವರಿಗೆ ಬಿಜೆಪಿಯವರು ಅವಮಾನ ಮಾಡ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ಬೊಮ್ಮಾಯಿ ಅವರಿಗೆ ಬಿಜೆಪಿಯವರು ಅವಮಾನ ಮಾಡ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

0

ಕಲಬುರಗಿ: ಸಿಎಂ ಆದವರಿಗೆ ವಿರೋದ ಪಕ್ಷದ ನಾಯಕ  ಸ್ಥಾನ ನೀಡುತ್ತಿಲ್ಲ. ಈ ಮೂಲಕ ಪಾಪ  ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿಯವರು ಅವಮಾನ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.

ಸಚಿವ ಸಂಪುಟವೇ ದೆಹಲಿಗೆ ಹೋಗಿ ಸಭೆ ಮಾಡುವುದು ಸರಿಯಲ್ಲ. ಇದು ರಾಜ್ಯದ ಜನತೆಗೆ ಮಾಡಿದ ಅಪಮಾನ ಎಂದು ಹೇಳಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.

ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹೀಗಾಗಿ ದೆಹಲಿಗೆ ಹೋಗುವುದು, ಬರುವುದು ಇದ್ದದ್ದೆ. ಮೊದಲು ಅವರ ಮನೆಯಲ್ಲಿ ಆಗುತ್ತಿರುವ ಅವಮಾನದ ಬಗ್ಗೆ ಲೆಕ್ಕ ಹಾಕಲಿ ಎಂದು ಹೇಳಿದ್ದಾರೆ.

ಹಿಂದಿನ ಲೇಖನಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ
ಮುಂದಿನ ಲೇಖನಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ