ಮನೆ ರಾಜಕೀಯ ಬಿಜೆಪಿಯವರಿಗೆ ಕಾಂಗ್ರೆಸ್‌ ಮೇಲೆ ಹೆಚ್ಚು ಆಸಕ್ತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬಿಜೆಪಿಯವರಿಗೆ ಕಾಂಗ್ರೆಸ್‌ ಮೇಲೆ ಹೆಚ್ಚು ಆಸಕ್ತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

0

ಬೆಂಗಳೂರು: ಬಿಜೆಪಿ ನಾಯಕರೂ ಅವರ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ನಮ್ಮ ಬಗ್ಗೆ ಮಾತ್ರ ಮಾತಾಡ್ತಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ ನಾಯಕರೂ ನಮ್ಮ ಬಗ್ಗೆ ಮಾತ್ರ ಮಾತಾಡ್ತಾರೆ. ಅವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಇದೆ. ಅವರೆಲ್ಲ ನಮ್ಮ ಪಕ್ಷಕ್ಕೆ ಬರ್ತಾರೇನೋ? ಅದಕ್ಕಾಗಿ ಕಾಂಗ್ರೆಸ್ ಬಗ್ಗೆ ಹೆಚ್ಚು ಚರ್ಚೆ ನಡೆಸ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಇನ್ನೆರಡು ಡಿಸಿಎಂ ಸ್ಥಾನಗಳ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಮೂರು ಡಿಸಿಎಂ ಚರ್ಚೆ ಹಳೆಯ ವಿಷಯ ಅಂದುಕೊಂಡಿದ್ದೆ. ಯಾವ ಸಂದರ್ಭದಲ್ಲಿ, ಯಾರಿಗೆ ಹುದ್ದೆ ಕೊಡಬೇಕು ಎಂಬ ನಿರ್ಧಾರ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ಲರೂ ಮಂತ್ರಿ ಆಗೋದು ಒಳ್ಳೆಯದೇ, ಹೈಕಮಾಂಡ್ ನವರು ಇದರ ಬಗ್ಗೆ ನಿರ್ಧಾರ ಮಾಡುತ್ತಾರೆ. ಒಂದು ವೇಳೆ ಅವರು ಸಚಿವ ಸ್ಥಾನ ಬಿಟ್ಟು ಕೊಡಲು ಹೇಳಿದರೆ ನಾನು ಬಿಟ್ಟುಕೊಡುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಯಾವಾಗಲು ಬದ್ದನಾಗಿರುತ್ತೇನೆ ಎಂದಿದ್ದಾರೆ.

ಸದ್ಯ ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲು ಹೋರಾಟ ನಡೆಯುತ್ತಿದೆ. ಗಡಿಯಲ್ಲಿ ಭದ್ರತೆ ಹೆಚ್ಚಳ ಮಾಡಿದ್ದೇವೆ. ಎಲ್ಲಿ ಸೂಕ್ಷ್ಮ ವಾತಾವರಣ ಇದೆಯೋ ಅಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಿ ಭದ್ರತಾ ವ್ಯವಸ್ಥೆ ಹೆಚ್ಚಳ ಮಾಡಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ಕೂಡ ಕರಾಳ ದಿನ ಮಾಡುತ್ತಿದೆ. ಹಾಗೇನಾದರೂ ಮಾಡಿದರೆ ಅದನ್ನು ತಡೆಯುವ ಕೆಲಸ ಕೂಡ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶಾಸಕರ ಬಹಿರಂಗ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ಶಾಸಕರ ಹೇಳಿಕೆಗಳ ಬಗ್ಗೆ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಈಗಾಗಲೇ ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಅಧ್ಯಕ್ಷರು ಸೂಚಿಸಿದ್ದಾರೆ. ರಮೇಶ್ ಜಾರಕಿಹೊಳಿ ಹೇಳಿಕೆಗಳಿಗೆ ಉತ್ತರ ಕೊಡಕ್ಕಾಗಲ್ಲ. ಪ್ರತಿಯೊಬ್ಬರಿಗೂ ಉತ್ತರ ಕೊಡ್ತಾ ಹೋದ್ರೆ ಕೊನೆ ಇರಲ್ಲ ಎಂದಿದ್ದಾರೆ.

ಹಿಂದಿನ ಲೇಖನಭೀಕರ ಅಪಘಾತ: ಮಗು ಸೇರಿದಂತೆ ಐವರ ಸಾವು
ಮುಂದಿನ ಲೇಖನಮೈಸೂರಿನಲ್ಲಿ ಪ್ಯಾಲೆಸ್ಟೈನ್ ಪರ ಎಸ್ ​ಡಿಪಿಐ ರ‍್ಯಾಲಿ ನಡೆಸಲು ನಿರ್ಧಾರ: 144 ಸೆಕ್ಷನ್ ಜಾರಿ