ರಾಯಚೂರು: ಬಿಜೆಪಿಯವರು ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ಮಾತ್ರ ನಮ್ಮ ವಿರೋಧ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ತಿಂಥಿಣಿಯ ಕಾಗಿನೆಲೆ ಕನಕಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಾನು ಅಯೋಧ್ಯೆಗೆ ಹೋಗಲ್ಲ ಎಂದೂ ಹೇಳಿಲ್ಲ. ಹೋಗುತ್ತೇನೆ ಎಂದೂ ಹೇಳಿಲ್ಲ ಎಂದು ಹೇಳಿದರು.
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಮೂರ್ತಿ ಸ್ಥಾಪನೆಗಾಗಲಿ, ಮಂದಿರ ಉದ್ಘಾಟನೆಗಾಗಲಿ. ಅದಕ್ಕೆ ನಮ್ಮ ವಿರೋಧ ಇಲ್ಲ. 22ರಂದು ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ ಎಂದರು.
ಶಾಸಕ ಯತೀಂದ್ರರನ್ನು ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿಸುವುದಾಗಿ ನಾನಾಗಲಿ ಬೇರೆ ಯಾರಾದರೂ ಹೇಳಿದ್ದಾರಾ? ಸಂಸದ ಪ್ರತಾಪ ಸಿಂಹಗೆ ಸೋಲಿನ ಭೀತಿ ಶುರುವಾಗಿದೆ. ಹೀಗಾಗಿ ಅವರಿಗೆ ಚಡಪಡಿಕೆ ಶುರುವಾಗಿದೆ. ಭೈರತಿ ಸುರೇಶ ವೀಕ್ಷಕರಾಗಿ ಹೋಗಿದ್ದು, ಅವರು ವರದಿ ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಸ್ಥಳೀಯ ಶಾಸಕರು, ಸಂಸದರು, ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಈಗ ಕಾಂತರಾಜ್ ಸಮೀಕ್ಷಾ ವರದಿಯನ್ನು ಎರಡು ತಿಂಗಳೊಳಗೆ ಕೊಡಲು ಸಮಯ ಕೊಟ್ಟಿದ್ದೇನೆ. ಅಷ್ಟರೊಳಗೆ ನೀಡಿದರೆ ಸ್ವೀಕರಿಸಲಾಗುವುದು ಎಂದು ತಿಳಿಸಿದರು.
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.