ಮನೆ ಆರೋಗ್ಯ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಆರ್.ಧ್ರುವನಾರಾಯಣ್

ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಆರ್.ಧ್ರುವನಾರಾಯಣ್

0

ಚಾಮರಾಜನಗರ: ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣವಾಗಿದ್ದು, ಮುಗ್ಧ ಮಕ್ಕಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೋಮುದಳ್ಳುರಿ ಸೃಷ್ಟಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆರೋಪಿಸಿದರು.

ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಾಮರಸ್ಯ, ಸೌಹಾರ್ದತೆ ಮನೆ ಮಾಡಿತ್ತು. ಗಣೇಶೋತ್ಸವ, ಹೋಳಿ ಹಬ್ಬಗಳನ್ನು ಎಲ್ಲರೂ ಸೇರಿ ಆಚರಿಸುತ್ತಿದ್ದರು. ಮುಸ್ಲಿಂ ವಿದ್ಯಾರ್ಥಿಗಳೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅಂತಹ ವಾತಾವರಣವನ್ನು ಬಿಜೆಪಿ ಈಗ ಕಲುಷಿತಗೊಳಿಸಿದೆ’ ಎಂದು ದೂರಿದರು.

ಮುಸ್ಲಿಂ ವಿದ್ಯಾರ್ಥಿನಿಯರು ಹಿಂದಿನಿಂದಲೇ ಹಿಜಾಬ್ ಹಾಕಿಕೊಂಡೇ ಶಾಲಾ ಕಾಲೇಜಿಗೆ ಬರುತ್ತಿದ್ದುದು ಈಗಲ್ಲ. ಆದರೆ, ಕೆಲವು ದಿನಗಳಿಂದ ಈ ಸಮಸ್ಯೆ ಉಂಟಾಗಿದೆ. ಬಿಜೆಪಿ ಮುಖಂಡರು ಹಿನ್ನಲೆಯಲ್ಲಿದ್ದುಕೊಂಡು ಈ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ’ ಎಂದು ಅವರು ದೂರಿದರು.’ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಬಿಜೆಪಿ ಸರ್ಕಾರ ಅವುಗಳನ್ನು‌ ನಿವಾರಿಸಲು ಗಮನಹರಿಸುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಕಂಡು ಬರುತ್ತಿರುವಾಗಲೇ, ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿಯು ಶಾಲಾ ಕಾಲೇಜುಗಳ ಮುಗ್ಧ ಮಕ್ಕಳನ್ನು ಬಳಸಿಕೊಂಡು ಕೋಮುಗಲಭೆ ಸೃಷ್ಟಿಸುತ್ತಿದೆ’ ಎಂದರು.’ವಿದ್ಯಾರ್ಥಿಗಳು ತಮ್ಮನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಗಮನ ಹರಿಸಬಾರದು’ ಎಂದು ಅವರು ಮನವಿ ಮಾಡಿದರು.’ಈ ವಿವಾದದ ಬಗ್ಗೆ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿಗಳು ನ್ಯಾಯಪರವಾದ ತೀರ್ಮಾನ ನೀಡುತ್ತದೆ ಎಂಬ ವಿಶ್ವಾಸ ಇದೆ’ ಎಂದರು.

ಹಿಂದಿನ ಲೇಖನಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ ಎಫ್ ದಾಳಿ
ಮುಂದಿನ ಲೇಖನಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ವಿಚಾರಣೆ: ಮಧ್ಯಂತರ ಆದೇಶಕ್ಕೆ ಅರ್ಜಿದಾರರ ಪರ ವಕೀಲರಿಂದ ಮನವಿ