ಮನೆ ರಾಜ್ಯ ಆರ್.ಶಂಕರ್ ನಿವಾಸದ ಮೇಲಿನ ದಾಳಿಯ ಹಿಂದೆ ಬಿಜೆಪಿ ಪಾತ್ರವಿಲ್ಲ: ಸಿಎಂ ಬೊಮ್ಮಾಯಿ

ಆರ್.ಶಂಕರ್ ನಿವಾಸದ ಮೇಲಿನ ದಾಳಿಯ ಹಿಂದೆ ಬಿಜೆಪಿ ಪಾತ್ರವಿಲ್ಲ: ಸಿಎಂ ಬೊಮ್ಮಾಯಿ

0

ಹುಬ್ಬಳ್ಳಿ: ಮಾಜಿ ಸಚಿವ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಹಿಂದೆ ಬಿಜೆಪಿ ಪಾತ್ರವಿಲ್ಲ. ತನಿಖಾ ಸಂಸ್ಥೆಗಳಿಗೆ ಸ್ವಾತಂತ್ರ್ಯ ನೀಡಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಶಂಕರ ಅವರ ಪ್ರಕರಣದಲ್ಲೂ ತನಿಖಾ ಸಂಸ್ಥೆ ತಮ್ಮದೆಯಾದ ಕೆಲಸ ಮಾಡಿವೆ ಎಂದರು.

ಸಿ.ಟಿ.ರವಿ ಹಾಗೂ ಬಿ.ವೈ.ವಿಜಯೇಂದ್ರ ನಡುವಿನ ಮಾತಿನ ಚಕಮಕಿ ಕುರಿತ ಕೇಳಿದ ಪ್ರಶ್ನೆಗೆ ಮಾಧ್ಯಮದವರ ಮೇಲೆ ಸಿಡಿಮಿಡಿಗೊಂಡು, ಇದು ಮಾಧ್ಯಮಗಳ ಸೃಷ್ಟಿ. ಸಚಿವ ಸೋಮಣ್ಣ ದೆಹಲಿಗೆ ಹೋಗುತ್ತಿರುವ ವಿಚಾರ ಗೊತ್ತಿದೆ ಎಂದು ಹೇಳಿದರು.

ಹಿಂದಿನ ಲೇಖನಬೇಸಿಗೆಯಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಸ್ಕಾಂಗಳ ನಿರ್ಧಾರ
ಮುಂದಿನ ಲೇಖನಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ?: ಕಾಂಗ್ರೆಸ್ ಪ್ರಶ್ನೆ