ಮಂಡ್ಯ: ವಿರೂಪಾಕ್ಷಪ್ಪ ಹಾಗೂ ಅವರ ಕುಟುಂಬವನ್ನು ಬಿಜೆಪಿ ಸರ್ಕಾರ ರಕ್ಷಣೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಡಿ..ವಿ ಸದಾನಂದ ಗೌಡ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತವನ್ನು ಮುಚ್ಚಿದ ಕಾಂಗ್ರೆಸ್ ಎಸಿಬಿ ತಂದು ರಕ್ಷಣೆ ಮಾಡಿಕೊಂಡರು. ಲೋಕಾಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದು ಬಿಜೆಪಿ. ಲೋಕಾಯುಕ್ತ ತೆಗೆದುಕೊಳ್ಳುವ ನಿರ್ಧಾರಕ್ಕೆ ಹಸ್ತಕ್ಷೇಪ ಮಾಡಲ್ಲ ಎಂದು ತಿಳಿಸಿದರು.
ನಾರಾಯಣ್ ಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಮಾತನಾಡಿ, ಸಂಜೆಗೆ ಅವರೇ ಯಾತ್ರೆಯನ್ನು ಲೀಡ್ ಮಾಡ್ತಾರೆ. ಸೋಮಣ್ಣ, ನಾರಾಯಣ್ ಗೌಡ ಸೇರಿದಂತೆ ನಮ್ಮ ಜೊತೆ ಇರುವವರು ಯಾರು ಹೋಗಲ್ಲ. ಬಿಜೆಪಿ ಕಡೆ ಒಳ್ಳೆಯ ಅಲೆ ಬರ್ತಿದೆ ಎಂದರು.
ಬೆಂಗಳೂರು-ಮೈಸೂರು ಹೆದ್ದಾರಿ ನಮ್ಮ ಕೊಡುಗೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಹೆದ್ದಾರಿ ಮಾಡಿದ್ದು ಬಿಜೆಪಿ ಎಂದು ಎಲ್ಲರಿಗೂ ಗೊತ್ತಿದೆ. ನಾವು ಮತ್ತೆ ಮತ್ತೆ ಸಮರ್ಥನೆ ಮಾಡ್ಕೊಳ್ಲೋದು ಸರಿಯಲ್ಲ ಎಂದರು.
ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದಾಗ ಖಂಡಿತವಾಗಿಯೂ ಯಾವುದಾದರೂ ಘೋಷಣೆ ಮಾಡ್ತಾರೆ. ಮಂಡ್ಯ ಅಭಿವೃದ್ಧಿ ಆದರೆ ಇಂಡಿಯಾ ಅಭಿವೃದ್ಧಿ ಆಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚುನಾವಣೆ ಬಂದಾಗ ರಾಷ್ಟ್ರ ನಾಯಕರು ಬರೋದು ಸಹಜ. ನೆಹರು, ಇಂದಿರಾಗಾಂಧಿ ಕಾಲದಿಂದಲೂ ಬರ್ತಾ ಇದ್ದಾರೆ. ಆಯಾ ಆಯಾ ಪಕ್ಷದ ನಾಯಕರು ಪಕ್ಷದ ಪರ ಬರ್ತಾರೆ.ಇವತ್ತು ದುರ್ದೈವ ಕಾಂಗ್ರೆಸ್’ಗೆ ರಾಷ್ಟ್ರಮಟ್ಟದಲ್ಲಿ ನಾಯಕರು ಇಲ್ಲ. ಜೆಡಿಎಸ್ ಪ್ರಾದೇಶಿಕ ಪಕ್ಷ. ರಾಷ್ಟ್ರದಲ್ಲಿ ಜಗತ್ತು ಒಪ್ಪಿಕೊಳ್ಳುವ ಪಕ್ಷ ಬಿಜೆಪಿ. ಹೀಗಾಗಿ ಅದರ ಲಾಭ ಪಡೆದುಕೊಳ್ಳುವ ಕೆಲಸ ನಾವು ಮಾಡ್ತಾ ಇದ್ದೀವಿ ಎಂದು ತಿಳಿಸಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.