ದಾವಣಗೆರೆ: ಅಧಿಕಾರಕ್ಕೆ ಬರುವ ಮ್ಯಾಜಿಕ್ ನಂಬರ್ ಜೊತೆಗೆ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಬಿಜೆಪಿ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ಪ್ರಚಾರ ನಡೆಸಿದ ಸಂದರ್ಭದಲ್ಲಿ ಬಿಜೆಪಿಯ ಪರ ವಾತಾವರಣ ಕಂಡು ಬರುತ್ತಿದೆ. ಯಾವುದೇ ಚುನಾವಣೆಯಾಗಲಿ ಧರ್ಮ, ಜಾತಿ ವಿಷಯದ ಆಧಾರದಲ್ಲಿ ನಡೆಯುವುದಿಲ್ಲ. ಅಭಿವೃದ್ಧಿ, ಜನರಿಗೆ ಏನು ಬೇಕೋ ಅಂತಹ ವಿಷಯ ಅಂದರೆ ಶಿಕ್ಷಣ, ಆರೋಗ್ಯ, ಉದ್ಯೋಗ ವಿಷಯದ ಆಧಾರದ ಮೇಲೆ ನಡೆಯುತ್ತವೆ. ಈ ಬಾರಿ ಜನರು ಅಂತಹ ವಿಷಯಗಳನ್ನೇ ಬಯಸುತ್ತಿದ್ದಾರೆ ಎಂದು ತಿಳಿಸಿದರು.
ಲಿಂಗಾಯತ ಮುಖ್ಯಮಂತ್ರಿಗಳ ಕುರಿತಂತೆ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯನ್ನು ತಿರುಚಿಲ್ಲ. ಅವರ ಮಾತನಾಡಿದ ವಿಡಿಯೋ ಇದೆ. ಸಿದ್ದರಾಮಯ್ಯ ಅವರೇ ತಮ್ಮ ಹೇಳಿಕೆ ಬದಲಾಯಿಸಿದ್ದಾರೆ. ಹಿಂದೆ ಬರೆದುಕೊಳ್ಳುವುದು ಇತ್ತು. ಈಗ ತಿರುಚಲಿಕ್ಕೆ ಬರುವುದಿಲ್ಲ. ಜನರೇನು ದಡ್ಡರಲ್ಲ ಎಂದರು.
ಬಂಡಾಯ ಎದ್ದಿರುವ ಜೊತೆಗೆ ಮಾತನಾಡಿದ್ದೇನು. ಶೇ.80 -90 ರಷ್ಟು ಜನರು ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ. ಮಾಡಾಳು ಮಲ್ಲಿಕಾರ್ಜುನ ಅವರೊಂದಿಗೆ ಒಂದು ವಾರದಿಂದ ಸಂಪರ್ಕ ಇಲ್ಲ. ಮಾಡಾಳು ವಿರುಪಾಕ್ಷಪ್ಪ ಅವರ ವಿಷಯ ಈಗಾಗಲೇ ಮುಗಿದ ವಿಚಾರ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯ ಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಇತರರು ಆಗಮಿಸುವರು ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.