ಮನೆ ಅಪರಾಧ ಬಿಎಂಟಿಸಿ ಬಸ್ ಢಿಕ್ಕಿ : ಬೈಕ್ ಸವಾರ ಸಾವು

ಬಿಎಂಟಿಸಿ ಬಸ್ ಢಿಕ್ಕಿ : ಬೈಕ್ ಸವಾರ ಸಾವು

0

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌‌.

ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ದುರ್ಘಟನೆ ಸಂಭವಿಸಿದೆ‌. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಬಳಿ ಮೆಜೆಸ್ಟಿಕ್ ಕಡೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಸುರೇಶ್ ಬಾಬುಗೆ ಡಿಕ್ಕಿ ಹೊಡೆದು ಫುಟ್‌ಪಾತ್ ಮೇಲೆ ಹತ್ತಿದೆ. ಗಂಭೀರವಾಗಿ ಗಾಯಗೊಂಡ ಸುರೇಶ್ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಿಂದಿನ ಲೇಖನರಾಷ್ಟ್ರಗೀತೆ ಹಾಡುವಾಗ ‘ಚ್ಯೂಯಿಂಗ್ ಗಮ್’ ಜಗಿದು ಟ್ರೋಲ್ ಆದ ಕೊಹ್ಲಿ
ಮುಂದಿನ ಲೇಖನಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ