ಮನೆ ರಾಜ್ಯ ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್  ಡಿಕ್ಕಿ: ಇಬ್ಬರ ಸಾವು

ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್  ಡಿಕ್ಕಿ: ಇಬ್ಬರ ಸಾವು

0

ಬೆಂಗಳೂರು: ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ.

ಯುವಕರು ಬಿಎಂಡಬ್ಲ್ಯೂ ಬೈಕ್‌ ಚಲಾಯಿಸುತ್ತಿದ್ದರು. ಯಶವಂತಪುರದಿಂದ ಆರ್‌ ಎಮ್‌ ಸಿ ಯಾರ್ಡ್ ರೋಡ್ ಕಡೆ ಡ್ರೈವ್ ಮಾಡುತ್ತಿದ್ದ ಇವರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಚಾಲನೆ ಮಾಡಿದ್ದುದು ಗೊತ್ತಾಗಿದೆ. ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ಮನಮೋಹನ್, ನಿಖಿಲ್ ವಾಪಸ್ ಬರುತ್ತಿದ್ದರು.

ವೇಗದಿಂದಾಗಿ ನಿಯಂತ್ರಣ ಸಿಗದೆ ಬೈಕ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರೂ ಬೈಕ್‌ ನಿಂದ ದೂರಕ್ಕೆ ಹಾರಿಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮನಮೋಹನ್ ಬನಶಂಕರಿ ನಿವಾಸಿ ಎಂಬ ಮಾಹಿತಿ ದೊರೆತಿದೆ. ಇಬ್ಬರ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಿಂದಿನ ಲೇಖನಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ: ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ
ಮುಂದಿನ ಲೇಖನಮುಕ್ತ ವಿವಿ ಬಿಕಾಂ ಪ್ರಶ್ನೆ ಪತ್ರಿಕೆ ಮಾರಾಟ: ಇಬ್ಬರು ವಿದ್ಯಾರ್ಥಿಗಳ ಬಂಧನ