ಮನೆ ಅಪರಾಧ ಕಣ್ಣಿಗೆ ಕಾರದ ಪುಡಿ ಎರಚಿ ಬಾಡಿ ಬಿಲ್ಡರ್ ಹತ್ಯೆ

ಕಣ್ಣಿಗೆ ಕಾರದ ಪುಡಿ ಎರಚಿ ಬಾಡಿ ಬಿಲ್ಡರ್ ಹತ್ಯೆ

0

ಬೆಳಗಾವಿ: ಕಣ್ಣಿಗೆ ಕಾರದ ಪುಡಿ ಎರಚಿ ಬಾಡಿ ಬಿಲ್ಡರ್ ನ್ನು ಹತ್ಯೆ ಮಾಡಿರುವ ಘಟನೆ ಕುಂದಾನಗರಿ ಬೆಳಗಾವಿಯ ಗುರುಪ್ರಸಾದ್ ಕಾಲೊನಿಯಲ್ಲಿ ನಡೆದಿದೆ.

 ಬಿಲ್ಡರ್ ರಾಜು ದೊಡ್ಡಬಣ್ಣವರ (46) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

 ಬೆಳಗಾವಿಯಲ್ಲಿ ಬಿಲ್ಡರ್​ ಕೊಲೆ, ಬೆಳಗಾವಿ ಅಪರಾಧ ಸುದ್ದಿ, ಬಿಲ್ಡರ್​ ರಾಜು ದೊಡ್ಡಬಸವಣ್ಣನವರ ಕೊಲೆ,ಬಿಲ್ಡರ್ ರಾಜು ದೊಡ್ಡಬಣ್ಣವರ ಕೊಲೆ‌ಬಸ್ತವಾಡ ಗ್ರಾಮದ ರಾಜು ಸದ್ಯ ಭವಾನಿ ನಗರದಲ್ಲಿ ‌ವಾಸವಿದ್ದರು.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ನೋಡಲು ಬೆಳಗ್ಗೆ ರಾಜು ತಮ್ಮ ಕಾರಿನಲ್ಲಿ ಹೊರಟಿದ್ದರು. ಆಗ ರಾಜು ಅವರ ಕಾರು ತಡೆದಿರುವ ದುಷ್ಕರ್ಮಿಗಳು ಕಣ್ಣಿಗೆ ಕಾರದ ಪುಡಿ ಎರಚಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ‌ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ ಕಂಡ ವಾಯುವಿಹಾರ ಮಾಡುತ್ತಿದ್ದ ಸ್ಥಳೀಯರು ಗ್ರಾಮೀಣ ‌ಠಾಣೆ‌‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಹತ್ಯೆಗೆ ಹಳೇ ದ್ವೇಷ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.