ಹೊಸ ದಿಲ್ಲಿ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗಲು ನಿರ್ಧರಿಸಿರುವ 19 ವಿರೋಧ ಪಕ್ಷಗಳ ನಿರ್ಧಾರವನ್ನು ಕೇಂದ್ರ ಸರ್ಕಾರ ದುರಾದೃಷ್ಟಕರ ಎಂದು ಹೇಳಿದ್ದು, ವಿರೋಧ ಪಕ್ಷಗಳು ತಮ್ಮ ತೀರ್ಮಾನವನ್ನು ಪುನರ್ ವಿಮರ್ಶೆ ಮಾಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೋರಿದ್ದಾರೆ.
ಇದೇ ಭಾನುವಾರ ಮೇ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ. ಆದರೆ, ವಿರೋಧ ಪಕ್ಷಗಳು ಮಾತ್ರ ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟನೆ ಮಾಡಬೇಕು ಎಂದು ಪಟ್ಟು ಹಿಡಿದಿವೆ. ರಾಷ್ಟ್ರಪತಿಗಳು ರಾಷ್ಟ್ರದ ಮುಖ್ಯಸ್ಥರಷ್ಟೇ ಅಲ್ಲ, ಸಂಸತ್ ನ ಅವಿಭಾಜ್ಯ ಅಂಗ ಎಂದು ವಿಪಕ್ಷಗಳು ವಾದ ಮಂಡಿಸಿವೆ.
ವಿಪಕ್ಷಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಇದೊಂದು ದುರಾದೃಷ್ಟಕರ ಬೆಳವಣಿಗೆ ಎಂದಿದ್ದಾರೆ. ವಿವಾದವೇ ಇಲ್ಲದ ವಿಷಯದಲ್ಲಿ ವಿವಾದ ಸೃಷ್ಟಿ ಮಾಡಲಾಗುತ್ತಿದೆ. ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕುವ ಮೂಲಕ ವಿರೋಧ ಪಕ್ಷಗಳು ಭಿನ್ನ ರಾಗ ಹಾಡುತ್ತಿವೆ. ಹೀಗಾಗಿ, ವಿಪಕ್ಷಗಳು ತಮ್ಮ ತೀರ್ಮಾನವನ್ನು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂದಿದ್ದಾರೆ.
ಲೋಕಸಭೆಯ ಸಭಾಧ್ಯಕ್ಷರು ಸಂಸತ್ನ ಪಾಲಕರಾಗಿದ್ದಾರೆ. ಅವರೇ ಖುದ್ದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಉದ್ಘಾಟನೆ ಮಾಡುವಂತೆ ಆಹ್ವಾನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.