ಮನೆ ರಾಜ್ಯ ಕಾರು ಹೊಂದಿದವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದಿಲ್ಲ: ಅರಗ ಜ್ಞಾನೇಂದ್ರ

ಕಾರು ಹೊಂದಿದವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದಿಲ್ಲ: ಅರಗ ಜ್ಞಾನೇಂದ್ರ

0

ಆನಂದಪುರ (ಶಿವಮೊಗ್ಗ) (Anandapura): ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮುರುಘಾ ಮಠದಲ್ಲಿ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಈಗ 50,000 ರೂ. ಹಾಗೂ 1 ಲಕ್ಷ ರೂ.ಗೂ ಹಳೆ ಕಾರುಗಳು ಸಿಗುತ್ತವೆ. ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದರು.

ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿ.ಎಂ ಆದೇಶ ಹೊರಡಿಸುತ್ತಾರೆ ಎಂದರು.

ಹಿಂದಿನ ಲೇಖನರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ
ಮುಂದಿನ ಲೇಖನಕೋವಿಡ್: ದೇಶದಲ್ಲಿ 9,436 ಪ್ರಕರಣ ವರದಿ; 30 ಮಂದಿ ಸಾವು