ವಿಜಯಪುರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಹಾರೈಸಿದರು.
ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ. ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.
ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು, ಜನರ ಕಷ್ಟದಲ್ಲಿ ಭಾಗಿಯಾಗಬೇಕು, ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಬೇಕು. ಆದರೆ ವಯಸ್ಸು 75 ದಾಟಿದೆ, ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ. ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ತಿಳಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.