ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ ಕೊನೆಯ ಭಾಷಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಯಡಿಯೂರಪ್ಪ ಅವರ ಭಾಷಣ ನನಗೆ ಸ್ಫೂರ್ತಿದಾಯಕ ಎಂದಿದ್ದಾರೆ.
ಮಾತ್ರವಲ್ಲದೇ, ಯಡಿಯೂರಪ್ಪ ಅವರ ಪಕ್ಷನಿಷ್ಠೆ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಯಡಿಯೂರಪ್ಪ ಅವರ ಭಾಷಣದಲ್ಲಿ ನಮ್ಮ (ಭಾರತೀಯ ಜನತಾ ಪಕ್ಷದ) ನೈತಿಕತೆ ಅಡಕವಾಗಿ ಎಂದು ತಿಳಿಸಿದ್ದಾರೆ.
ಬಿಜೆಪಿ ಕರ್ನಾಟಕ ತನ್ನ ಟ್ವೀಟ್’ನಲ್ಲಿ ಯಡಿಯೂರಪ್ಪ ಅವರ ಭಾಷಣವಿರುವ 21 ನಿಮಿಷದ ದೃಶ್ಯವನ್ನು ಹಂಚಿಕೊಂಡಿತ್ತು. ಆ ಟ್ವೀಟ್’ಗೆ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
“ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಅವರ ಭಾಷಣದ ಬಗ್ಗೆ ಇಂಗ್ಲಿಷ್ ಮತ್ತು ಕನ್ನಡ ಎರಡು ಭಾಷೆಯಲ್ಲೂ ಟ್ವೀಟ್ ಮಾಡಿದ್ದಾರೆ. ಇನ್ನು ಪ್ರಧಾನಿಗಳ ಟ್ವೀಟ್’ಗೆ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.