ಪಣಜಿ: ಮಾಪ್ಸಾದ ತಾಲಿವಾಡಾದಲ್ಲಿ ಹಳೇಯ ಮತ್ತು ಶಿಥಿಲಗೊಂಡ ಕಟ್ಟಡದ ಸ್ಲ್ಯಾಬ್ ಕುಸಿದುಬಿದ್ದ ಪರಿಣಾಮ ಅಲ್ಲಿಯೇ ನಿಲ್ಲಿಸಿದ್ದ ಎರಡು ಕಾರುಗಳು ಮತ್ತು ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಅದೃಷ್ಠವಶಾತ್ ಕಟ್ಟಡದ ಕೆಳಗೆ ಯಾರೂ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ. ಆದರೆ ಇದೇ ಮಾರ್ಗದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೋರ್ವನಿಗೆ ಚಿಕ್ಕಪುಟ್ಟ ಗಾಯಗಳಾಗಿದೆ.
ಈ ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ವಾಹನಗಳ ಮೇಲೆ ಬಿದ್ದಿದ್ದ ಸ್ಲ್ಯಾಬ್ ಭಾಗವನ್ನು ಅಗ್ನಿಶಾಮಕ ದಳದ ಸಿಬ್ಬಂಧಿಗಳು ತೆರವುಗೊಳಿಸಿದರು. ಈ ಕಟ್ಟಡವು ಸುಮಾರು 46 ವರ್ಷದಷ್ಟು ಹಳೇಯದಾಗಿದ್ದು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದೆ.
ಸಂತೆಯ ನಿಮಿತ್ತ ಮಾರುಕಟ್ಟೆಯಲ್ಲಿ ವಾಹನಗಳು ಭಾರಿಸಂಖ್ಯೆಯಲ್ಲಿ ಓಡಾಟ ನಡೆಸಿದ್ದವು. ವಾಹ ನಿಲುಗಡೆಗೆ ಜಾಗವಿಲ್ಲದ ಕಾರಣ ಜನರು ತಮ್ಮ ವಾಹನವನ್ನು ಈ ಹಳೇಯ ಕಟ್ಟಡದ ಕೆಳಗೆ ನಿಲ್ಲಿಸಿದ್ದರು ಎನ್ನಲಾಗಿದೆ.
ಕಾರ್ಪೊರೇಟರ್ ಸುಧೀರ್ ಕಾಂದೋಳಕರ್ ನೀಡಿರುವ ಮಾಹಿತಿಯ ಅನುಸಾರ- ಈ ಅಪಾಯಕಾರಿ ಕಟ್ಟಡವನ್ನು ತೆರವುಗೊಳಿಸುವಂತೆ ಸಂಬಂಧಿತ ವ್ಯಕ್ತಿಗೆ ನೋಟಿಸ್ ನೀಡಲಾಗಿದೆ. ಆದರೂ ಈ ಕಟ್ಟಡವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಕಟ್ಟಡದ ಮಾಲೀಕ ಮುಕುಂದ ಕೋಸ್ಕರ್ ಮಾತನಾಡಿ-ಕಟ್ಟಡ ಅಪಾಯಕಾರಿಯಾಗಿದ್ದರಿಂದ 2018 ರಲ್ಲಿ ಬಾಡಿಗೆದಾರರನ್ನು ತೆರವುಗೊಳಿಸಿ ಕಟ್ಟಡ ಕಡಗುವಂತೆ ಪುರಸಭೆಗೆ ಮನವಿ ಮಾಡಿದ್ದರೂ ಪುರಸಭೆ ನಿರ್ಲಕ್ಷ್ಯವಹಿಸಿದೆ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.