ಮನೆ ರಾಜ್ಯ ಬಸ್ ಅಪಘಾತ: ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಅಪಘಾತ: ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಗಾಯ

0

ಸಂಡೂರು: ತಾಲ್ಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ಮಧ್ಯೆ ಕೆಎಸ್‌ ಆರ್‌ ಟಿಸಿ ಬಸ್ ಬುಧವಾರ ನೆಲಕ್ಕುರುಳಿದೆ. ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ ನಲವತ್ತಕ್ಕೂ‌ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀವಾಗಿ ಗಾಯಗೊಂಡಿರುವ ಹತ್ತು ಮಕ್ಕಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್‌ ಕೈ ಮುರಿದಿದೆ.

ಚಿಕಿತ್ಸೆ ನೀಡಲಾಗುತ್ತಿರುವ ಸಂಡೂರು ಸಾರ್ವಜನಿಕ  ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದು ಬಂದಿಲ್ಲ.

ಗಿರೆನಹಳ್ಳಿ, ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್‌ ನಲ್ಲಿ ಶಾಲಾ ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದರು.

ಹಿಂದಿನ ಲೇಖನವಿವಾಹ ಮುರಿದು ಬಿದ್ದಿದೆ ಎಂದು ಕೌಟುಂಬಿಕ ನ್ಯಾಯಾಲಯಗಳು ವಿಚ್ಛೇದನ ನೀಡುವಂತಿಲ್ಲ: ದೆಹಲಿ ಹೈಕೋರ್ಟ್
ಮುಂದಿನ ಲೇಖನಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ: ಕೆ.ಎಸ್.ಈಶ್ವರಪ್ಪ