ಮನೆ ರಾಷ್ಟ್ರೀಯ ನಿಂತಿದ್ದ ಟ್ರಕ್ ಗೆ ಬಸ್‌ ಡಿಕ್ಕಿ: ಮೂವರ ಸಾವು 6 ಮಂದಿಗೆ ಗಾಯ

ನಿಂತಿದ್ದ ಟ್ರಕ್ ಗೆ ಬಸ್‌ ಡಿಕ್ಕಿ: ಮೂವರ ಸಾವು 6 ಮಂದಿಗೆ ಗಾಯ

0

ಬಿಲಾಸ್‌ ಪುರ: ಬಸ್‌ ವೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ ಗಢದ ಬಿಲಾಸ್‌ ಪುರ ಜಿಲ್ಲೆಯಲ್ಲಿ ಇಂದು ನಡೆದಿದೆ.

Join Our Whatsapp Group

ಮೃತರನ್ನು ಸೂರಜ್‌ಪುರ ಜಿಲ್ಲೆಯ ಸಜನ್ (30), ರುಕ್‌ದೇವ್ (45) ಮತ್ತು ಬಸ್ ಚಾಲಕ ಬಲರಾಮ್‌ಪುರ ಜಿಲ್ಲೆಯ ನಿವಾಸಿ ಅಕ್ರಂ ರಾಜಾ (28) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಯ್‌ಪುರದ ಸೈನ್ಸ್ ಕಾಲೇಜು ಮೈದಾನದಲ್ಲಿ ಪ್ರಧಾನಿಯವರ ರ‍್ಯಾಲಿಯನ್ನು ಆಯೋಜಿಸಲಾಗಿತ್ತು ಈ ರ್ಯಾಲಿಗಾಗಿ ಸುಮಾರು 40 ಜನರಿದ್ದ ಬಸ್ ಅಂಬಿಕಾಪುರದಿಂದ ರಾಯಪುರಕ್ಕೆ ತೆರಳುತ್ತಿದ್ದಾಗ ಬೆಲ್ಟಾರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಬಿಲಾಸ್‌ ಪುರ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಅನ್ನು, ಬಸ್ ಚಾಲಕನಿಗೆ ಸ್ಪಷ್ಟವಾಗಿ ಗೋಚರಿಸದ ಕಾರಣ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಹಿಂದಿನ ಲೇಖನಬ್ಯಾಂಕ್ ಖಾತೆ ದಾಖಲಾತಿ ಸಲ್ಲಿಕೆ ನೆಪದಲ್ಲಿ ರೈತನಿಗೆ 1.19 ಲಕ್ಷ ವಂಚನೆ
ಮುಂದಿನ ಲೇಖನನಟ ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು 6 ಕೋಟಿ ರೂ ಅನುದಾನ