ಮನೆ ಅಪರಾಧ ಬಸ್ ಪಲ್ಟಿ: ನಾಲ್ವರ ಸಾವು, 24 ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಪಲ್ಟಿ: ನಾಲ್ವರ ಸಾವು, 24 ಕ್ಕೂ ಹೆಚ್ಚು ಮಂದಿಗೆ ಗಾಯ

0

ಜಮ್ಮು ಮತ್ತು ಕಾಶ್ಮೀರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಮಾಹಿತಿ ಪ್ರಕಾರ, ಅವಂತಿಪೋರಾದ ಗೋರಿಪೋರಾ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ, ಮತ್ತೊಬ್ಬರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಮೃತಪಟ್ಟಿದ್ದಾರೆ.

ಘಟನೆಯಿಂದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಸ್‌ಡಿಹೆಚ್ ಪಾಂಪೋರ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಎನ್‌’ಎಚ್‌’ಡಬ್ಲ್ಯೂನಲ್ಲಿ ಸಂಚಾರವನ್ನ ಪುನಾರಂಭಿಸಲಾಗಿದೆ.

ಎಸ್‌’ಡಿಹೆಚ್ ಪಾಂಪೋರ್​ಗೆ ಕರೆತರಲಾದ ಇತರೆ 16 ಮಂದಿ ಗಾಯಾಳುಗಳಲ್ಲಿ 11 ಮಂದಿಯನ್ನ ಶ್ರೀನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 5 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್‌ಡಿಹೆಚ್‌ನ ವೈದ್ಯರು ಹೇಳಿದ್ದಾರೆ.

ಹಿಂದಿನ ಲೇಖನತಾಕತ್ತಿದ್ದರೇ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲಿ: ವರ್ತೂರು ಪ್ರಕಾಶ್
ಮುಂದಿನ ಲೇಖನತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ: ಸಂಚಾರ ಪೊಲೀಸರು, ಸ್ಥಳೀಯರಿಂದ ರಕ್ಷಣೆ