ಮನೆ ರಾಜ್ಯ ರಾಮನಗರದಲ್ಲಿ ಬಸ್ ಕೊರತೆ: ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ರಾಮನಗರದಲ್ಲಿ ಬಸ್ ಕೊರತೆ: ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

0

ರಾಮನಗರ: ಡಿಸಿಎಂ ಡಿಕೆಶಿ ತವರು ಜಿಲ್ಲೆಯಲ್ಲೇ ಬಸ್ ಕೊರತೆ ಉಂಟಾಗಿದ್ದು, ಅಗತ್ಯಕ್ಕೆ ತಕ್ಕಂತೆ ಬಸ್ ಇಲ್ಲದೇ ಪ್ರಯಾಣಿಕರ ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ರಾಮನಗರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Join Our Whatsapp Group

ಈ ವೇಳೆ ಕೆಎಸ್ ಆರ್ ಟಿಸಿ ಬಸ್ ತಡೆಯಲು ವಿಧ್ಯಾರ್ಥಿಗಳು ಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

ಬಸ್ ಕೊರತೆಯಿಂದಾಗಿ ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಹಲವು ಬಾರಿ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸ್ಥಳಕ್ಕೆ ಶಾಸಕರು ಬರಬೇಕು, ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಹಿಂದಿನ ಲೇಖನಸರಣಿ ಅಪಘಾತ: ರಸ್ತೆ ಬಿಟ್ಟು ಅಂಗಡಿಗಳಿಗೆ ನುಗ್ಗಿದ ವಾಹನಗಳು
ಮುಂದಿನ ಲೇಖನಟಾಟಾ ಏಸ್ ವಾಹನ ಪಲ್ಟಿ: ಓರ್ವ ಸಾವು, 8 ಮಂದಿಗೆ ಗಾಯ