ರಾಮನಗರ(Ramnagar): ತಾಲ್ಲೂಕಿನ ಬಿಳಗುಂಬ ಅಂಡರ್ ಪಾಸ್ ನಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಒಂದು ಮಳೆ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
ಉದಯರಂಗ ಹೆಸರಿನ ಈ ಬಸ್ ಬೆಂಗಳೂರಿನಿಂದ ಮಳವಳ್ಳಿಗೆ ಹೊರಟಿದ್ದು, ಬಸ್ ನಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಬಸ್ ನ ಅರ್ಧ ಮಟ್ಟಕ್ಕೆ ನೀರು ನಿಂತಿದ್ದು, ಮುಂದೆ ಚಲಿಸಲು ಸಾಧ್ಯವಾಗದೇ ಇದ್ದ ಪರಿಣಾಮ ನೆರವಿಗೆ ಧಾವಿಸಿದ ಸ್ಥಳೀಯರು ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದರು.
ರೈಲು ಸಂಚಾರ ಸ್ಥಗಿತ ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ. ಇದರಿಂದಾಗಿ ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಸಾಕಷ್ಟು ಕಡೆಗಳಲ್ಲಿ ಮನೆಗೆ ನೀರು ನುಗ್ಗಿದೆ. ಕೆರೆಗಳು ಕೋಡಿ ಬಿದ್ದಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.