ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಜ್ಞಾನವಾಪಿ ಮಸೀದಿಯಲ್ಲಿ ದೊರೆತ ವಸ್ತುವಿನ ಕಾಲ ನಿರ್ಧರಿಸುವುದಕ್ಕೆ ಬಳಸುವ ಕಾರ್ಬನ್ ಡೇಟಿಂಗ್, ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್), ಉತ್ಖನನ ಮತ್ತಿತರ ವಿಧಾನಗಳಿಂದ ಆ ವಸ್ತುವಿಗೆ ಹಾನಿಯಾಗುತ್ತದೆಯೇ ಎಂಬ ಕುರಿತು ಅಭಿಪ್ರಾಯ ನೀಡುವಂತೆ ಅಲಾಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಹಾನಿರ್ದೇಶಕರಿಗೆ ಸೂಚಿಸಿದೆ.
ಶಿವಲಿಂಗ ಎಂದು ಕರೆಯುವ ವಸ್ತುವಿನ ವೈಜ್ಞಾನಿಕ ತನಿಖೆ ನಡೆಸಬೇಕೆಂದು ಕೋರಿದ್ದ ಮನವಿಯನ್ನು ತಿರಸ್ಕರಿಸಿ ಜಿಲ್ಲಾ ನ್ಯಾಯಾಧೀಶರು ಅಕ್ಟೋಬರ್ 14ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾ. ಜೆ ಜೆ ಮುನೀರ್ ಈ ಆದೇಶ ನೀಡಿದ್ದಾರೆ.
ದೊರೆತಿರುವ ವಸ್ತವಿನ ಕಾಲಮಾನದ ಪರೀಕ್ಷೆ ನಡೆಸಿದರೆ ಅದಕ್ಕೆ ಹಾನಿಯಾಗುತ್ತದೆಯೇ ಅಥವಾ ಸುರಕ್ಷಿತ ಪರೀಕ್ಷೆ ಸಾಧ್ಯವೇ ಎಂಬ ಕುರಿತು ಮುಂದಿನ ವಿಚಾರಣೆಯ ದಿನದ ಒಳಗಾಗಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಎಎಸ್’ಐಗೆ ತಿಳಿಸಿದೆ.
ಹಿಂದೂ ದೇವಲಯವಾಗಿರುವ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ದೇವತೆಗಳಿದ್ದು ಆವರಣದೊಳಗೆ ಪೂಜೆ ಮಾಡುವ ಹಕ್ಕು ಕೋರಿ ಹಿಂದೂ ಭಕ್ತರು ಸಿವಿಲ್ ನ್ಯಾಯಾಲಯದ ಮೊರೆ ಹೋಗುವ ಮೂಲಕ ವ್ಯಾಜ್ಯ ಆರಂಭವಾಗಿತ್ತು. ನ್ಯಾಯಾಲಯದ ಆದೇಶದಂತೆ ಅಡ್ವೊಕೇಟ್ ಕಮಿಷನರ್ ಸಲ್ಲಿಸಿದ ವರದಿ ಆಧರಿಸಿ ಮಸೀದಿಯಲ್ಲಿ ಪತ್ತೆಯಾದ ವಸ್ತು ಶಿವಲಿಂಗ ಎಂದು ಹಿಂದೂ ಪಕ್ಷಕಾರರು ಹೇಳಿದರೆ ಅದು ಕೇವಲ ನೀರಿನ ಕಾರಂಜಿ ಎಂಬುದಾಗಿ ಮುಸ್ಲಿಂ ಕಕ್ಷಿದಾರರು ಪ್ರತಿಪಾದಿಸಿದ್ದರು.
ಈ ಮಧ್ಯೆ ಪ್ರಕರಣದ ಸೂಕ್ಷ್ಮತೆ ಗಮನಿಸಿ ಸಿವಿಲ್ ನ್ಯಾಯಾಲಯದ ಮುಂದಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿತು. ಜಿಲ್ಲಾ ನ್ಯಾಯಾಲಯ ಕಳೆದ ಸೆಪ್ಟೆಂಬರ್ನಲ್ಲಿ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ- 1991ರ ಅಡಿ ಮೊಕದ್ದಮೆಯನ್ನು ನಿರ್ಬಂಧಿಸಿಲ್ಲ ಎಂದಿತು.
ಆ ವಸ್ತು ಶಿವಲಿಂಗವೇ ಅಥವಾ ಕಾರಂಜಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿವಾದಿತ ವಸ್ತುವಿನ ಕಾರ್ಬನ್ ಡೇಟಿಂಗ್ ಕೋರಿ ನಾಲ್ವರು ಹಿಂದೂ ಪಕ್ಷಕಾರರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶ ಡಾ. ಎ ಕೆ.ವಿಶ್ವೇಶ ಅವರು ಅಕ್ಟೋಬರ್ 14 ರಂದು ಅರ್ಜಿಯನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಪ್ರಸ್ತುತ ಮೇಲ್ಮನವಿ ಸಲ್ಲಿಸಲಾಗಿತ್ತು.