ಉತ್ತರ ಪ್ರದೇಶ: ರಾವಣನ ಅಹಂಕಾರ, ಕಂಸನ ಘರ್ಜನೆಯಿಂದ ಅಲುಗಾಡದ ಸನಾತನ ಧರ್ಮವನ್ನು ಈಗ ಅಳಿಸಲು ಸಾಧ್ಯವೇ? ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶ್ನೆ ಮಾಡಿದ್ದಾರೆ.
ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಯೋಗಿ ಆದಿತ್ಯನಾಥ್, ಆದಿ ಕಾಲದಿಂದಲೂ ಸಾಧ್ಯವಾಗದೇ ಇರೋದನ್ನ ಇವರು ಯಾರೋ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ರಾವಣನ ದುರಹಂಕಾರ ಸನಾತನ ಧರ್ಮವನ್ನು ಅಳಿಸಲಾಗಲಿಲ್ಲ. ಕಂಸನ ಘರ್ಜನೆ ಧರ್ಮವನ್ನು ಅಲುಗಾಡಿಸಲಾಗಲಿಲ್ಲ. ಅಷ್ಟು ಮಾತ್ರವಲ್ಲದೆ ಬಾಬರ್ ಮತ್ತು ಔರಂಗಜೇಬನ ದೌರ್ಜನ್ಯಗಳಿಂದಲೂ ಸನಾತನ ಧರ್ಮವನ್ನು ಏನೂ ಮಾಡಲು ಸಾಧ್ಯವಾಗಲಿಲ್ಲ. ಹೀಗಿರುವಾಗ ಈ ನಗಣ್ಯ ವ್ಯಕ್ತಿಗಳು ಸನಾತನ ಧರ್ಮವನ್ನು ಹೇಗೆ ನಾಶ ಮಾಡಬಲ್ಲರು? ಎಂದು ಪ್ರಶ್ನೆ ಮಾಡಿದ್ದಾರೆ.
ಸದ್ಯ ಇಡೀ ದೇಶವೀಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಸರ್ಕಾರವನ್ನು ಟೀಕಿಸಲು ಅವರಿಗೆ ಬೇರೆ ಯಾವ ವಿಚಾರಗಳೂ ಸಿಗುತ್ತಿಲ್ಲ. ಅದಕ್ಕಾಗಿ ಸನಾತನ ಧರ್ಮದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ದೇಶ ಅಭಿವೃದ್ಧಿ ಆಗುತ್ತಿದ್ದರೆ, ಕೆಲವರಿಗೆ ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಒಂದು ಮಾತಿದೆ ಸೂರ್ಯನನ್ನು ನೋಡಿ ಉಗುಳಿದರೆ ಎಂಜಲು ಬೀಳುವುದು ಉಗುಳಿದವನ ಮುಖಕ್ಕೆ ಎಂಬುದು ಆತನಿಗೆ ತಿಳಿದಿಲ್ಲ, ರಾವಣ, ಹಿರಣ್ಯಕಶ್ಯಪ ಮತ್ತು ಕಂಸನಂಥವರು ದೈವಿಕ ಶಕ್ತಿಗೆ ಸವಾಲು ಹಾಕಿದ್ದರು. ಕೊನೆಗೆ ಅವರು ಎಲ್ಲವನ್ನೂ ಕಳೆದುಕೊಂಡರು. ಅವರ ಪಾಲಿಗೆ ಏನೂ ಉಳಿಯಲಿಲ್ಲ. ಆದರೆ, ಸನಾತನ ಧರ್ಮದ ದೇವರು ಉಳಿದುಕೊಂಡಿದ್ದಾನೆ ಮತ್ತು ಈಗಲೂ ಇದ್ದಾನೆ.ಸನಾತನ ಧರ್ಮವು ಸತ್ಯವಾಗಿದೆ ಮತ್ತು ಎಂದಿಗೂ ಅಳಿಸಲು ಸಾಧ್ಯವಿಲ್ಲ ಎಂದರು.
ಉತ್ತರ ಪ್ರದೇಶ ಉತ್ತಮ ರಾಜ್ಯಗಳಲ್ಲಿ ಒಂದಾಗಿದೆ ಎಂದು ಯೋಗಿ ಹೇಳಿದರು. ಇದು ದೇವರ ಕೃಪೆ. ಸನಾತನ ಧರ್ಮ ಎದ್ದು ನಿಂತಾಗ ಅಯೋಧ್ಯೆ ಮತ್ತು ಕಾಶಿಯಲ್ಲಿ ರಾಮಮಂದಿರ ಏಳುತ್ತದೆ ಮತ್ತು ಈ ನಗರಗಳು ಬೆಳೆಯುತ್ತಲೇ ಇರುತ್ತದೆ ಎಂದಿದ್ದಾರೆ.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.