ಮೈಸೂರು(Mysuru): ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳು ಮತ ಚಲಾಯಿಸಿದರು.
ಜೆಡಿಎಸ್ ಅಭ್ಯರ್ಥಿ ಎಚ್.ಕೆ. ರಾಮು ಕುವೆಂಪು ನಗರದ ಸರ್ಕಾರಿ ಪಿಯು ಕಾಲೇಜಿನ ಮತಗಟ್ಟೆ ಸಂಖ್ಯೆ 42ರಲ್ಲಿ ಮತ ಹಾಕಿದರು.
ರೈತ- ದಲಿತ ಚಳವಳಿಗಳ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಅವರು ರಾಮಕೃಷ್ಣ ನಗರ ಮತಗಟ್ಟೆ ಸಂಖ್ಯೆ 36ರಲ್ಲಿ ಮತ ಚಲಾಯಿಸಿದರು. ಅವರಿಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸಾಥ್ ನೀಡಿದರು.