ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣ ನೀಡಿ ವಾಹನವನ್ನು ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ವಾಹನಕ್ಕೆ ವಿಮಾ ಮಾಡಿಸಿಲ್ಲ ಎಂಬ ಕಾರಣ ನೀಡಿ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಚೌಡೇಶ್ವರಿ ನಗರದ ನಿವಾಸಿ ಗಣೇಶ್ ಎಂಬುವರು ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಗೊಳಿಸಿದೆ.
ಅಲ್ಲದೇ, ಅರ್ಜಿಯನ್ನು ಪುರಸ್ಕರಿಸಿ, ಅರ್ಜಿದಾರರಿಗೆ ಅಗತ್ಯ ಷರತ್ತುಗಳನ್ನು ವಿಧಿಸಿ ವಾಹನ ಬಿಡುಗಡೆಗೆ ಸೂಚನೆ ನೀಡಿ ಆದೇಶಿಸಿದೆ.
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರ ಹಿತಾಸಕ್ತಿ ಕಾಪಾಡುವುದು ಮತ್ತು ಪರಿಹಾರ ಪಡೆಯುವುದಕ್ಕಾಗಿ ರಾಜ್ಯ ವಿಧಾನ ಮಂಡಲ ಕರ್ನಾಟಕ ಮೋಟಾರು ವಾಹನ ನಿಯಮ – 1989ರ ಅಡಿ 232ಜಿ ಗೆ ತಿದ್ದುಪಡಿ ಮಾಡಿದೆ. ಅದರಂತೆ ವಾಹನ ಬಿಡುಗಡೆ ಮಾಡಲು ಷರತ್ತುಗಳನ್ನು ವಿಧಿಸಬಹುದಾಗಿದೆ.
ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ಸಂತ್ರಸ್ತರಾಗಿದ್ದಾರೆ. ಹೀಗಾಗಿ ಅರ್ಜಿದಾರರ ವಾಹನ ಬಿಡುಗಡೆ ಮಾಡಬಹುದು ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಲದೇ, ಘಟನೆಯ ಆರೋಪಿಯಾಗಿರುವವರು ತಮ್ಮ ತಪ್ಪು ಒಪ್ಪಿಕೊಂಡಿದ್ದು, ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗಾಗಿ ಅರ್ಜಿದಾರರು ಯಾವುದೇ ರೀತಿಯ ಪರಿಹಾರವನ್ನು ಪಾವತಿ ಮಾಡಬೇಕಾದ ಅಗತ್ಯವಿಲ್ಲ. ಹೀಗಾಗಿ ಅರ್ಜಿದಾರರ ವಾಹನಕ್ಕೆ ವಿಮೆ ಮಾಡಿಸಿಲ್ಲ ಎಂಬ ಕಾರಣ ನೀಡಿ ವಾಹನ ಬಿಡುಗಡೆ ಮಾಡುವುದಕ್ಕೆ ನಿರಾಕರಣೆ ಮಾಡುವಂತಿಲ್ಲ. ಅಲ್ಲದೇ, ಅಗತ್ಯ ಷರತ್ತುಗಳನ್ನು ವಿಧಿಸಿ ವಾಹನ ಬಿಡುಗಡೆ ಮಾಡಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.ಪ್ರಕರಣದ ಹಿನ್ನೆಲೆ ಏನು? ಬೆಂಗಳೂರಿನ ಚೌಡೇಶ್ವರಿ ನಗರದ ನಿವಾಸಿಯಾಗಿರುವ ಅರ್ಜಿದಾರ ಗಣೇಶ್ ಎಂಬುವವರ ಮಾಲೀಕತ್ವದ ಐಶರ್ ಕ್ಯಾಂಟರ್ ವಾಹನ 2021ರ ಜನವರಿ 22ರಂದು ಮೈಸೂರು ರಸ್ತೆಯಲ್ಲಿ ಹೋಗುತ್ತಿದ್ದಾಗ ಕೆಟ್ಟು ಹೋಗಿತ್ತು. ಈ ಸಂದರ್ಭದಲ್ಲಿ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಮೆಕಾನಿಕ್’ಗಾಗಿ ಕಾಯುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಮಾರುತಿ ಸುಜುಕಿ ಬ್ರೀಜಾ ಕಾರು ಬಂದು ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಇದರಿಂದ ಕಾರಿನ ಮುಂಭಾಗ ಜಖಂಗೊಂಡು ಕೆಲವರಿಗೆ ಸಣ್ಣ ಪುಟ್ಟ ಗಾಯಳಾಗಿದ್ದವು.ಪ್ರಕರಣ ದಾಖಲಿಸಿಕೊಂಡಿದ್ದ ಬಿಡದಿ ಪೊಲೀಸರು, ಎರಡೂ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ಈ ವೇಳೆ, ಕಾರು ಚಾಲಕ ಅತಿವೇಗದಿಂದ ಬಂದ ಪರಿಣಾಮ ಈ ಘಟನೆ ನಡೆದಿದೆ ಎಂದು ತಪ್ಪೊಪ್ಪಿಕೊಂಡಿದ್ದರು. ಜೊತೆಗೆ, ಶಿಕ್ಷೆಗೂ ಗುರಿಯಾಗಿದ್ದರು. ಈ ನಡುವೆ ಅರ್ಜಿದಾರ ಗಣೇಶ್, ತಮ್ಮ ಐಶರ್ ವಾಹನ ಬಿಡಗಡೆ ಮಾಡುವಂತೆ ಕೋರಿ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಾನಹನಕ್ಕೆ ವಿಮೆ ಮಾಡಿಸಿಲ್ಲ ಎಂಬ ಕಾರಣ ನೀಡಿ ವಾಹನ ಬಿಡುಗಡೆಗೆ ನಿರಾಕರಿಸಿತ್ತು. ಜೊತೆಗೆ, ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾರು ಐಶರ್ ಮಾಲೀಕರ ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಹೈಕೋರ್ಟ್ ಆದೇಶ ನೀಡಿದ್ದು, ವಿಮೆ ಮಾಡಿಸಿಲ್ಲ ಎಂದು ವಾಹನ ಬಿಡುಗಡೆ ನಿರಾಕರಿಸುವಂತಿಲ್ಲ ಸೂಚನೆ ನೀಡಿದೆ.