ಮನೆ ಸುದ್ದಿ ಜಾಲ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ

ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ

0

ನವದೆಹಲಿ : ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್‌ ಸಿಂಗ್‌ ಅವರ ಪತ್ನಿ ಸಂದೀಪ್ ಕೌರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದ ಬಳಿಕ ನವಜೋತ್ ಸಿಂಗ್ ಪುತ್ರ ಮಾತನಾಡಿದ್ದು, ಅಂಬುಲೆನ್ಸ್‌ ಚಾಲಕನ ವಿರುದ್ಧ ಆರೋಪ ಮಾಡಿದ್ದಾರೆ. ನಮ್ಮ ತಂದೆ-ತಾಯಿಯನ್ನ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದ್ರೆ ಅಪಘಾತದ ನಡೆದ ಸ್ಥಳದಿಂದ 17 ಕಿಮೀ ದೂರದಲ್ಲಿರುವ ಜಿಟಿಬಿ ನಗರದ ನುಲೈಫ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೀಗಾಗಿ ನನ್ನ ತಂದೆ ಮಾರ್ಗಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ.

ಪೊಲೀಸರು ಹೇಳುವಂತೆ ಅಪಘಾತ ನಡೆಧ ಸ್ಥಳದಲ್ಲಿ ಕಾರು ರಸ್ತೆ ಪಕ್ಕದಲ್ಲಿ ಬಿದ್ದಿತ್ತು, ಬೂಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಇತ್ತು. ಅಪಘಾತ ನಡೆದಾಗ ಗಗನ್‌ ಪ್ರೀತ್‌ ಹೆಸರಿನ ಮಹಿಳೆ ಕಾರು ಚಲಾಯಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರೋದಾಗಿ ತಿಳಿಸಿದ್ದಾರೆ. ಅಪಘಾತದ ಬಳಿಕ ಬಿಎಂಡಬ್ಲ್ಯೂ ಕಾರು ಜಾಗೂ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದ್ದು, ಎಫ್‌ಎಸ್‌ಎಲ್‌ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ.