ಮನೆ ರಾಜ್ಯ ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಅಪಘಾತ: ಮೂವರ ಸಾವು

ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಅಪಘಾತ: ಮೂವರ ಸಾವು

0

ಚಿತ್ರದುರ್ಗ (Chitradurga): ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರಿನ ರಾಜಾಜಿನಗರದ ಮನೀಷ್ (27), ಪತ್ನಿ ಸಿಂಚನಾ (24) ಹಾಗೂ ಸಹೋದರಿ ಭೂಮಿಕಾ (22) ಮೃತಪಟ್ಟವರು. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಗಿರಿಧರ್, ಆಶಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಐವರು ಬೆಂಗಳೂರಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದರು. ಕಾರು ಸೀಬಾರ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಏಕಾಏಕಿ ವಿಭಜಕಕ್ಕೆ ನುಗ್ಗಿದ್ದು, ಸುಮಾರು 150 ಮೀಟರ್‌ ದೂರದವರೆಗೆ ವಿಭಜಕದ ಮೇಲೆ ಚಲಿಸಿದೆ. ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಚಿತ್ರದುರ್ಗದತ್ತ ಬರುತ್ತಿದ್ದ ಲಾರಿಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನರಾಜ್ಯದ ಹಲವೆಡೆ ಇಂದು ಭಾರಿ ಮಳೆ