ಮನೆ ರಾಜ್ಯ ಕಾವೇರಿ ಹೋರಾಟ: ಸೆ.26 ರಂದು ಬೆಂಗಳೂರು ಬಂದ್

ಕಾವೇರಿ ಹೋರಾಟ: ಸೆ.26 ರಂದು ಬೆಂಗಳೂರು ಬಂದ್

0

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಇಂದು ಮಂಡ್ಯ ಮತ್ತು ಬೆಂಗಳೂರಿನಲ್ಲಿ  ವಿವಿಧ  ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು,  ಈ ನಡವೆ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ ಗೆ ಕರೆ ನೀಡಿರುವುದಾಗಿ ಫ್ರೀಡಂಪಾರ್ಕ್ ​ನಲ್ಲಿ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಘೋಷಣೆ ಮಾಡಿದ್ದಾರೆ.

ಸೆಪ್ಟಂಬರ್ 26 ಮಂಗಳವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್ ​ಹಾಲ್​ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ  ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕು. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು. ಸರ್ಕಾರಕ್ಕೆ ಒತ್ತಾಯ ವಿಶೇಷವಾದ ವಿಧಾನಮಂಡಲದ ಅಧಿವೇಶನ ಕರೆಯಬೇಕು ಎಂದು ಕುರುಬೂರು ಶಾಂತಕುಮಾರ್  ತಿಳಿಸಿದರು.

ಹಿಂದಿನ ಲೇಖನದೇವೇಗೌಡರಿಗೆ ಮತ ಹಾಕಿದರೆ ತುಮಕೂರಿನ ಜನತೆ ಪಾಪ ಮಾಡಿದಂಗೆ: ಎಸ್ ಬಸವರಾಜು
ಮುಂದಿನ ಲೇಖನಕಾವೇರಿ ನೀರು ಬಿಡುವ ನಿರ್ಧಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ