ಮನೆ ರಾಜ್ಯ ಚೈತ್ರಾ ಗ್ಯಾಂಗ್ ​ನಿಂದ ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಬಿಡುಗಡೆ

ಚೈತ್ರಾ ಗ್ಯಾಂಗ್ ​ನಿಂದ ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಬಿಡುಗಡೆ

0

ಆನೇಕಲ್: ಚೈತ್ರಾ ಗ್ಯಾಂಗ್ ​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ  ಬಿಡುಗಡೆಯಾಗಿದ್ದಾರೆ.

ಹೈಕೋರ್ಟ್ ​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಎಂಎಲ್ ​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಪರಪ್ಪನ ಅಗ್ರಹಾರ ಸೇರಿದ್ದರು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆ ಇಂದು ಹಾಲಶ್ರೀ ಅವರು ಜೈಲಿನಿಂದ ಹೊರ ಬಂದಿದ್ದು, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಾಲಶ್ರೀ, ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಅದನ್ನು ಪ್ರಕರಣದ ತನಿಖೆ ವೇಳೆ ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ನಮ್ಮನ್ನ ನಂಬಿ ಅರಾಧಿಸುವ ಸಮಾಜಕ್ಕೆ ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೆನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ ಎಂದರು.

ಹಿಂದಿನ ಲೇಖನ೨೪ ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆಯಲು ಅಯೋಧ್ಯೆ ಸಜ್ಜು
ಮುಂದಿನ ಲೇಖನಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್‌ ಮಾಲೀಕತ್ವದ ಶಾಲೆಯನ್ನು ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ ಇಲಾಖೆಗೆ ಹಸ್ತಾಂತರ