ಮನೆ ರಾಜ್ಯ ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಉರುಳಿ 15 ಮಂದಿಗೆ ಗಾಯ

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಉರುಳಿ 15 ಮಂದಿಗೆ ಗಾಯ

0

ಚಾಮರಾಜನಗರ(Chamarajanagar): ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದ ಪರಿಣಾಮ 15 ಜನರು ಗಾಯಗೊಂಡಿದ್ದಾರೆ.

ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ.

ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಹಿಂದಿನ ಲೇಖನಆಕಸ್ಮಿಕ ಬೆಂಕಿಗೆ ಒಕ್ಕಣೆ ಮಾಡಲು ಹಾಕಿದ್ದ ಹುಲ್ಲು ಬೆಂಕಿಗಾಹುತಿ
ಮುಂದಿನ ಲೇಖನಆರ್.ಡಿ. ಪಾಟೀಲ ಹೇಳಿಕೆ: ಹೈಕೋರ್ಟ್‌ ನ್ಯಾಯಮೂರ್ತಿಯಿಂದ ತನಿಖೆಗೆ ಸುರ್ಜೇವಾಲ ಒತ್ತಾಯ