ಮನೆ ರಾಜ್ಯ ಚಾಮರಾಜನಗರ: ಚುನಾವಣಾ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ನಿಧನ

ಚಾಮರಾಜನಗರ: ಚುನಾವಣಾ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ನಿಧನ

0

ಚಾಮರಾಜನಗರ: ಸರ್ಕಾರಿ ನೌಕರರಿಗೆ ಚುನಾವಣೆ ತರಬೇತಿ ನೀಡಲಾಗುತ್ತಿದ್ದು, ಚುನಾವಣೆ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ಮೃತಪಟ್ಟ ಘಟನೆ ಹನೂರಿನಲ್ಲಿ ನಡೆದಿದೆ.

Join Our Whatsapp Group

ಜಗದೀಶ್ (40) ಮೃತ ನೌಕರ.

ಹನೂರಿನ ವಿವೇಕಾನಂದ ಶಾಲೆಯಲ್ಲಿ ಏರ್ಪಡಿಸಿದ್ದ ತರಬೇತಿ ಆರಂಭವಾಗುತ್ತಿದ್ದಂತೆ ಎದೆನೋವಿನಿಂದ ಕುಸಿದು ಬಿದ್ದ ಜಗದೀಶ್, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಉಸಿರು ನಿಲ್ಲಿಸಿದ್ದಾರೆ. ಜಗದೀಶ್ ತಾಲೂಕು ಖಜಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಹಿಂದಿನ ಲೇಖನಅಪಘಾತದಲ್ಲಿ ಶೇ.100ರಷ್ಟು ಅಂಗವಿಕಲಳಾದ ಶಾಲಾ ಬಾಲಕಿಗೆ ₹1.12 ಕೋಟಿ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಆದೇಶ
ಮುಂದಿನ ಲೇಖನಕೊಪ್ಪಳ: ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಸಿ.ವಿ ಚಂದ್ರಶೇಖರ