ಮನೆ ರಾಜ್ಯ ಚಾಮರಾಜನಗರ: ಡಿಸಿಗೆ ದೂರು ನೀಡಿ ವೃದ್ಧಾಪ್ಯ ವೇತನ, ಅನ್ನಭಾಗ್ಯದ ಹಣ ಪಡೆದ ವೃದ್ಧೆ

ಚಾಮರಾಜನಗರ: ಡಿಸಿಗೆ ದೂರು ನೀಡಿ ವೃದ್ಧಾಪ್ಯ ವೇತನ, ಅನ್ನಭಾಗ್ಯದ ಹಣ ಪಡೆದ ವೃದ್ಧೆ

0

ಚಾಮರಾಜನಗರ: ವೃದ್ಧಾಪ್ಯ ವೇತನ ಹಾಗೂ ಅನ್ನಭಾಗ್ಯದ ಹಣ ಕೈ ಸೇರದ ವೃದ್ಧೆಯೊಬ್ಬರು ಡಿಸಿಗೆ ದೂರು ಕೊಟ್ಟು ತನ್ನ ಹಣವನ್ನು ತಾನು ಪಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಚೆನ್ನಬಸಮ್ಮ‌ ಎಂಬವರು ದೂರು ಕೊಟ್ಟು ತಮ್ಮ ಹಣ ಪಡೆದ ವೃದ್ಧೆ.

ತೆರಕಣಾಂಬಿ ಗ್ರಾಹಕ ಸೇವಾ ಕೇಂದ್ರದಲ್ಲಿ ತನಗರಿವಿಲ್ಲದೇ ವೃದ್ಧಾಪ್ಯ ವೇತನ ₹1200 ಹಾಗೂ ಅನ್ನಭಾಗ್ಯದ ನಗದು ₹340 ಡ್ರಾ ಆಗಿದೆ. ಆದರೆ ಅದನ್ನು ತಾನು ಪಡೆದಿಲ್ಲ, ತನಗೆ ನ್ಯಾಯ ದೊರಕಿಸಿಕೊಡಿ ಎಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ಅವರಿಗೆ ಕಳೆದ 21 ರಂದು  ದೂರು ಕೊಟ್ಟಿದ್ದರು.

ಡಿಸಿ ಚಾಮರಾಜನಗರ ತಹಶಿಲ್ದಾರ್ ಬಸವರಾಜು ಅವರಿಗೆ ವಿಚಾರಣೆ ನಡೆಸುವಂತೆ ಸೂಚಿಸಿದ್ದರು. ತಹಶಿಲ್ದಾರ್ ಬಸವರಾಜು ಅವರು ಗ್ರಾಹಕ ಸೇವಾ ಕೇಂದ್ರದ ಪ್ರತಿನಿಧಿ, ಫಲಾನುಭವಿ ಚೆನ್ನಬಸಮ್ಮ ಇಬ್ಬರನ್ನೂ ವಿಚಾರಣೆ‌ ನಡೆಸಿ ಡ್ರಾ ಆದ ಹಣ ವೃದ್ಧೆ ಕೈ ಸೇರದಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಗ್ರಾಹಕ ಸೇವಾ ಕೇಂದ್ರದ ಪ್ರತಿನಿಧಿಯಿಂದ 1540 ನ್ನು ವೃದ್ಧೆಗೆ ಕೊಡಿಸಿದ್ದಾರೆ.

ಹಿಂದಿನ ಲೇಖನಸೆಪ್ಟಂಬರ್ 1ರಿಂದ 10ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಮುಂದಿನ ಲೇಖನಶೀತ /ನೆಗಡಿ