ಚಾಮರಾಜನಗರ: ವೃದ್ಧಾಪ್ಯ ವೇತನ ಹಾಗೂ ಅನ್ನಭಾಗ್ಯದ ಹಣ ಕೈ ಸೇರದ ವೃದ್ಧೆಯೊಬ್ಬರು ಡಿಸಿಗೆ ದೂರು ಕೊಟ್ಟು ತನ್ನ ಹಣವನ್ನು ತಾನು ಪಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಚೆನ್ನಬಸಮ್ಮ ಎಂಬವರು ದೂರು ಕೊಟ್ಟು ತಮ್ಮ ಹಣ ಪಡೆದ ವೃದ್ಧೆ.
ತೆರಕಣಾಂಬಿ ಗ್ರಾಹಕ ಸೇವಾ ಕೇಂದ್ರದಲ್ಲಿ ತನಗರಿವಿಲ್ಲದೇ ವೃದ್ಧಾಪ್ಯ ವೇತನ ₹1200 ಹಾಗೂ ಅನ್ನಭಾಗ್ಯದ ನಗದು ₹340 ಡ್ರಾ ಆಗಿದೆ. ಆದರೆ ಅದನ್ನು ತಾನು ಪಡೆದಿಲ್ಲ, ತನಗೆ ನ್ಯಾಯ ದೊರಕಿಸಿಕೊಡಿ ಎಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ಅವರಿಗೆ ಕಳೆದ 21 ರಂದು ದೂರು ಕೊಟ್ಟಿದ್ದರು.
ಡಿಸಿ ಚಾಮರಾಜನಗರ ತಹಶಿಲ್ದಾರ್ ಬಸವರಾಜು ಅವರಿಗೆ ವಿಚಾರಣೆ ನಡೆಸುವಂತೆ ಸೂಚಿಸಿದ್ದರು. ತಹಶಿಲ್ದಾರ್ ಬಸವರಾಜು ಅವರು ಗ್ರಾಹಕ ಸೇವಾ ಕೇಂದ್ರದ ಪ್ರತಿನಿಧಿ, ಫಲಾನುಭವಿ ಚೆನ್ನಬಸಮ್ಮ ಇಬ್ಬರನ್ನೂ ವಿಚಾರಣೆ ನಡೆಸಿ ಡ್ರಾ ಆದ ಹಣ ವೃದ್ಧೆ ಕೈ ಸೇರದಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಗ್ರಾಹಕ ಸೇವಾ ಕೇಂದ್ರದ ಪ್ರತಿನಿಧಿಯಿಂದ 1540 ನ್ನು ವೃದ್ಧೆಗೆ ಕೊಡಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.